AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?

ಹೈದರಾಬಾದ್​ನಲ್ಲಿ ಝೊಮ್ಯಾಟೊ ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?
ಝೊಮ್ಯಾಟೊ ಡೆಲಿವರಿ ಬಾಯ್Image Credit source: News 18
ನಯನಾ ರಾಜೀವ್
|

Updated on:Jan 03, 2024 | 10:43 AM

Share

ಹೈದರಾಬಾದ್​ನಲ್ಲಿ ಝೊಮ್ಯಾಟೊ(Zomato) ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಕುದುರೆ ಮೇಲೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹಿಟ್​ ಆ್ಯಂಡ್​ ರನ್​ ಕಾನೂನು ಹಿಂಪಡೆಯುವ ಕುರಿತು ಟ್ರಕ್​, ಬಸ್​ ಚಾಲಕರು ದೇಶದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಈ ನಡುವೆ ಪೆಟ್ರೋಲ್​ ಬಂಕ್​ಗಳಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಮೂರು ಗಂಟೆಗಳ ಕಾಲ ಪೆಟ್ರೋಲ್​ ಬಂಕ್​ನಲ್ಲಿ ನಿಂತಿದ್ದೆ, ಬಳಿಕ ತಮ್ಮ ಬೈಕ್​ ಅನ್ನು ಪೆಟ್ರೋಲ್​ ಬಂಕ್ ಬಳಿಯೇ ಇಟ್ಟು ಕುದುರೆ ಬಾಡಿಗೆಗೆ ತೆಗೆದುಕೊಂಡು ಸವಾರಿ ಮುಂದುವರೆಸಿದೆ ಎಂದು ಹೇಳಿದ್ದಾರೆ.

ಡೆಲಿವರಿ ಬಾಯ್ ಕುದುರೆಯ ಮೇಲೆ ಆಹಾರವನ್ನು ತಲುಪಿಸಲು ಇಂಪೀರಿಯಲ್ ಹೋಟೆಲ್​ ಬಳಿಯ ಚಂಚಲಗುಡಕ್ಕೆ ಬಂದಿದ್ದಾರೆ. ಟ್ರಕ್ ಡ್ರೈವರ್‌ಗಳ ಮುಷ್ಕರದಿಂದಾಗಿ ಪೆಟ್ರೋಲ್ ಕೊರತೆ ಉಂಟಾಗಿದ್ದು, ಯುವಕನಿಗೆ ಕುದುರೆಯ ಮೇಲೆ ಆಹಾರವನ್ನು ತಲುಪಿಸುವುದು ಅನಿವಾರ್ಯವಾಗಿತ್ತು ಎಂದು ಯುವಕ ಹೇಳಿದ್ದಾನೆ.

ಮತ್ತಷ್ಟು ಓದಿ: ಮುಷ್ಕರ ವಾಪಸ್ ಪಡೆದ ಟ್ರಕ್ ಚಾಲಕರು; ಜನರು ನಿರಾಳ

ಇತ್ತೀಚೆಗೆ ಕೇಂದ್ರ ಸರ್ಕಾರವು ಹಿಟ್ ಆ್ಯಂಡ್​ ರನ್ ಕೇಸ್‌ನಲ್ಲಿ ಹೊಸ ನಿಬಂಧನೆಗಳನ್ನು ಜಾರಿಗೆ ತಂದಿದೆ.ದರ ಅಡಿಯಲ್ಲಿ 7 ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಈ ಕಾನೂನು ವಿರೋಧಿಸಿ ಟ್ರಕ್​, ಬಸ್​, ಅನೇಕ ಸಂಘಟನೆಗಳು ಮುಷ್ಕರ ನಡೆಸಿದ್ದವು. ಆದರೆ, ಈ ಹೊಸ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರುವುದಿಲ್ಲ ಎಂದು ಸರ್ಕಾರ ಈಗಷ್ಟೇ ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Wed, 3 January 24

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!