ಥಾಣೆಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಮಹಾರಾಷ್ಟ್ರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ನಿರ್ಮಾಣ ಹಂತದ ಬಹುಮಹಡಿ ಕಟ್ಟಡವೊಂದರ 13ನೇ ಮಹಡಿಯಿಂದ ಬೃಹತ್ ಕನ್ಸ್ಟ್ರಕ್ಷನ್ ಕ್ರೇನ್ ಕೆಳಗೆ ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತವು ಮುಂಬೈನ ಹೊರವಲಯದಲ್ಲಿರುವ ಮೀರಾ ರೋಡ್ನ 'ಜೆಪಿ ನಾರ್ತ್' ವಸತಿ ಸಂಕೀರ್ಣದಲ್ಲಿ ನಡೆದಿದೆ. ಅಪಘಾತದ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ವಾಹನಗಳ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ಯುದ್ಧೋಪಾದಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ನಡೆಸಿ ಮುಕ್ತಾಯಗೊಳಿಸಲಾಗಿದೆ. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈ, ಜುಲೈ 16: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್ ಪ್ರದೇಶದಲ್ಲಿ ಇಂದು ಸಂಜೆ ಭೀಕರ ಅಪಘಾತವೊಂದು ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಳವಡಿಸಲಾಗಿದ್ದ ಬೃಹತ್ ಕ್ರೇನ್ ನಿಯಂತ್ರಣ ತಪ್ಪಿ ಕೆಳಗಡೆ ನಿಲ್ಲಿಸಲಾಗಿದ್ದ ಹಲವು ವಾಹನಗಳ ಮೇಲೆ ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತವು ಮೀರಾ ರೋಡ್ನಲ್ಲಿರುವ ನಿರ್ಮಾಣ ಹಂತದ ಬಹುಮಹಡಿ ಕಟ್ಟಡವೊಂದರಲ್ಲಿ ನಡೆದಿದೆ. ಕ್ರೇನ್ ಅನ್ನು ಕಟ್ಟಡದ 13ನೇ ಮಹಡಿಯಲ್ಲಿ ನಿಲ್ಲಿಸಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಆದರೆ, ತಾಂತ್ರಿಕ ದೋಷದಿಂದ ಅದು ಭೀಕರ ಶಬ್ದದೊಂದಿಗೆ ನೇರವಾಗಿ ಕೆಳಗೆ ಬಿದ್ದಿದೆ.
ಆ ಕಟ್ಟಡದ ಕೆಳಗೆ ಹಾಗೂ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಲವು ಕಾರು ಮತ್ತು ಬೈಕ್ಗಳ ಮೇಲೆ ಈ ದೈತ್ಯ ಕ್ರೇನ್ ಬಿದ್ದಿದೆ. ಇದರ ತೀವ್ರತೆಗೆ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಕ್ರೇನ್ ಬಿದ್ದ ರಭಸಕ್ಕೆ ಸ್ಥಳದಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನಗಳಲ್ಲಿದ್ದ ಹಾಗೂ ಹತ್ತಿರದಲ್ಲಿದ್ದ ಇನ್ನು ಕೆಲವು ನಾಗರಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ವಿಪತ್ತು ನಿರ್ವಹಣಾ ಸಿಬ್ಬಂದಿ ಭೇಟಿ ನೀಡಿದ್ದು, ವಾಹನಗಳ ಅಡಿಯಲ್ಲಿ ಯಾರಾದರೂ ಸಿಲುಕಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ

