AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸ್ಫೋಟ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಓರ್ವ ಶಂಕಿತ ಪೊಲೀಸ್ ವಶಕ್ಕೆ

ದೆಹಲಿ ಸ್ಫೋಟ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಓರ್ವ ಶಂಕಿತ ಪೊಲೀಸ್ ವಶಕ್ಕೆ

ರಮೇಶ್ ಬಿ. ಜವಳಗೇರಾ
|

Updated on:Nov 10, 2025 | 9:48 PM

Share

ದೆಹಲಿಯ ಕೆಂಪುಕೋಟೆ ಬಳಿ ಕಾರಿನನಲ್ಲಿ ಇಂದು ಸಂಜೆ ಸ್ಪೋಟ ಸಂಭವಿಸಿದೆ. ಸ್ಪೋಟದಿಂದಾಗಿ 10 ಮಂದಿ ಸಾವನ್ನಪ್ಪಿದ್ದಾರೆ. 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಈ ಸ್ಫೋಟದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರಗೊಂಡು ರಸ್ತೆ ತುಂಬೆಲ್ಲಾ ಬಿದ್ದಿವೆ. ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಳಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ದೇಶಾದ್ಯಂತ ಹೈ ಆಲರ್ಟ್ ಘೋಷಿಸಲಾಗಿದೆ. ಇನ್ನು ಸ್ಫೋಟದ ಬಗ್ಗೆ ಎನ್ಐಎ, ಎನ್ಎಸ್​ಜಿ ತನಿಖೆ ನಡೆಸುತ್ತಿದ್ದು, ಘಟನೆ ನಡೆದ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಸದ್ಯದ ಮಾಹಿತಿ ಪ್ರಕಾರ ಓರ್ವ ಶಂಕಿತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ, (ನವೆಂಬರ್ 10): ದೆಹಲಿಯ ಕೆಂಪುಕೋಟೆ ಬಳಿ ಕಾರಿನನಲ್ಲಿ ಇಂದು ಸಂಜೆ ಸ್ಪೋಟ ಸಂಭವಿಸಿದೆ. ಸ್ಪೋಟದಿಂದಾಗಿ 10 ಮಂದಿ ಸಾವನ್ನಪ್ಪಿದ್ದಾರೆ. 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಈ ಸ್ಫೋಟದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರಗೊಂಡು ರಸ್ತೆ ತುಂಬೆಲ್ಲಾ ಬಿದ್ದಿವೆ. ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಳಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ದೇಶಾದ್ಯಂತ ಹೈ ಆಲರ್ಟ್ ಘೋಷಿಸಲಾಗಿದೆ. ಇನ್ನು ಸ್ಫೋಟದ ಬಗ್ಗೆ ಎನ್ಐಎ, ಎನ್ಎಸ್​ಜಿ ತನಿಖೆ ನಡೆಸುತ್ತಿದ್ದು, ಘಟನೆ ನಡೆದ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಸದ್ಯದ ಮಾಹಿತಿ ಪ್ರಕಾರ ಓರ್ವ ಶಂಕಿತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಫೋಟ ಸಂಬಂಧ ದೆಹಲಿ ಪೊಲೀಸ್ ಕಮಿಷನರ್ ಸತೀಶ್ ಗೋಲ್ಚಾ ಮಾತನಾಡಿದ್ದು, ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಳಿಯ ಸಿಗ್ನಲ್​ನಲ್ಲಿ ಕಾರು ನಿಧಾನವಾಗಿ ಚಲಿಸುತ್ತಿದ್ದ ವೇಳೆ ಸ್ಫೋಟವಾಗಿದ್ದು, ಕಾರಿನಲ್ಲಿದ್ದವರು ಮೃತಪಟ್ಟಿರುವ ಸಾಧ್ಯತೆಯಿದೆ. ಸ್ಫೋಟದ ಬಗ್ಗೆ ಎನ್ಐಎ, ಎನ್ಎಸ್​ಜಿ ತನಿಖೆ ನಡೆಸುತ್ತಿದೆ. ಸ್ಫೋಟದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಸದ್ಯ ಓರ್ವ ಶಂಕಿತನನ್ನು ವಶಕ್ಕೆ ಪಡೆದುಕೊಂಡಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ. ಶಂಕಿತ ವಿಚಾರಣೆ ವೇಳೆ ತಿಳಿಸಿದ ಮಾಹಿತಿ ಮೇರೆಗೆ ಸ್ಫೋಟಕ ಕಾರಣ ಗೊತ್ತಾಗಲಿದೆ.

Published on: Nov 10, 2025 09:47 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More