ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಂಜುನಾಥ್ ಆಚಾರ್ ಎಂಬುವವರ ಮನೆ ಬಾಗಿಲಿಗೆ ತಂಪಾದ ನೆರಳು ಹುಡುಕಿಕೊಂಡು ಬಂದ ಈ ಹಾವು, ಹೊಸ್ತಿಲಲ್ಲೇ ತಣ್ಣಗೆ ಮಲಗಿತ್ತು. ಮುಂಜಾನೆ ಇದನ್ನು ಕಂಡ ಮನೆಯವರು ಭಯಭೀತರಾಗಿದ್ದಾರೆ.
ಚಿಕ್ಕಮಗಳೂರು, ಮೇ 19: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಂಜುನಾಥ್ ಆಚಾರ್ ಎಂಬುವವರ ಮನೆ ಬಾಗಿಲಿಗೆ ತಂಪಾದ ನೆರಳು ಹುಡುಕಿಕೊಂಡು ಬಂದ ಈ ಹಾವು, ಹೊಸ್ತಿಲಲ್ಲೇ ತಣ್ಣಗೆ ಮಲಗಿತ್ತು. ಮುಂಜಾನೆ ಇದನ್ನು ಕಂಡ ಮನೆಯವರು ಭಯಭೀತರಾಗಿದ್ದಾರೆ.
ಸುಮಾರು 10 ಅಡಿ ಉದ್ದವಿದ್ದ ಈ ಬೃಹತ್ ಕಾಳಿಂಗ ಸರ್ಪವನ್ನು ಕಂಡು ಗ್ರಾಮಸ್ಥರು ತಕ್ಷಣವೇ ಉರಗ ತಜ್ಞ ಸ್ನೇಕ್ ಆರೀಫ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆರೀಫ್, ಹಾವನ್ನು ಜಾಗರೂಕತೆಯಿಂದ ಸೆರೆಹಿಡಿದಿದ್ದಾರೆ. ಬಳಿಕ ಅದನ್ನು ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದ್ದು, ಸದ್ಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us