ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋ ಕೋಚಿಂಗ್ ಸೆಂಟರ್ನಲ್ಲಿ ಉಂಟಾದ ಬೆಂಕಿಯ ಜ್ವಾಲೆಗೆ 14 ವಿದ್ಯಾರ್ಥಿಗಳು ಸಜೀವ ದಹನವಾಗಿದ್ದಾರೆ. ಈ ದುರಂತಕ್ಕೆ ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಯಾಗಿರುವುದು ತೀವ್ರ ಆಘಾತ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ಪ್ರಗತಿಯಲ್ಲಿದ್ದು, ಅಧಿಕಾರಿಗಳು ಸಾಧ್ಯವಿರುವ ಎಲ್ಲಾ ನೆರವು ನೀಡುತ್ತಿದ್ದಾರೆ" ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.
ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow Coaching Centre Fire Accident) ಭೀಕರ ದುರಂತವೊಂದು ಸಂಭವಿಸಿದೆ. ಕೋಚಿಂಗ್ ಸೆಂಟರ್ ಇದ್ದ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ಜೀವಂತವಾಗಿ ದಹನವಾಗಿದ್ದಾರೆ. ಪೂರ್ಣಿಯಾ ವಲಯದಲ್ಲಿರುವ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಈ ಕೋಚಿಂಗ್ ಸಂಸ್ಥೆ ಕಾರ್ಯನಿರ್ವಹಿಸುತ್ತಿತ್ತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಕಟ್ಟಡದ ಭಾಗಗಳನ್ನು ವೇಗವಾಗಿ ಆವರಿಸಿದ್ದರಿಂದ, ಹಲವಾರು ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಜಿಗಿದರು. ಆದರೂ ಒಳಗೆ ಹಲವು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ 14 ಜನ ಮೃತಪಟ್ಟಿದ್ದಾರೆ.
ಈ ಭೀಕರ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಹಿಸಲಾರದ ಘಟನೆ ಇದಾಗಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಇತ್ತ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ಘಟನೆಯ ಬಗ್ಗೆ ತೀವ್ರ ಕಳವಳ ಮತ್ತು ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಗೊಂಡ ಎಲ್ಲರಿಗೂ ಉಚಿತ ಮತ್ತು ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅವರು ಸ್ಥಳೀಯ ಆಡಳಿತಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
“ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಯಾಗಿರುವುದು ತೀವ್ರ ಆಘಾತ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ಪ್ರಗತಿಯಲ್ಲಿದ್ದು, ಅಧಿಕಾರಿಗಳು ಸಾಧ್ಯವಿರುವ ಎಲ್ಲಾ ನೆರವು ನೀಡುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಧನವನ್ನು ಪ್ರಧಾನಿ ಘೋಷಿಸಿದ್ದಾರೆ.
(Video Source: PTI)
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ

