ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡುತ್ತಿರುವುದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ಅಧಿಕಾರಿ
1 ಲಕ್ಷ 20 ಸಾವಿರ ಆದಾಯ ಹೊಂದಿದ ಕುಟುಂಬ, ತೆರಿಗೆ ಹಾಗೂ 7 ಎಕರೆ ಗೂ ಅಧಿಕ ಜಮೀನು ಹೊಂದಿರೋ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸರ್ಕಾರ ಆದೇಶ ಮಾಡಿದೆ. ಪಡಿತರ ಅಂಗಡಿಗಳ ಮುಂದೆ ನೋಟಿಸ್ ಹಾಕಿ ದಾಖಲೆಗಳನ್ನ ನೀಡಲು ಸೂಚನೆ ನೀಡಿದೆ. ಇದರಿಂದ ಬಡಕುಟುಂಬಗಳು ಕಂಗಲಾಗಿದ್ದು, ಸರ್ಕಾರ ಮರುಪರಿಶೀಲನೆ ಮಾಡಿ ಅನರ್ಹ ಮಾಡಬೇಕು. ಹಾವೇರಿ ಜಿಲ್ಲೆಯಲ್ಲಿಯೇ 14 ಸಾವಿರಕ್ಕೂ ಅಧಿಕ ಕಾರ್ಡ್ ರದ್ದು ಮಾಡಲು ಆದೇಶ ಮಾಡಲಾಗಿದೆ. ಒಟ್ಟು ಹಾವೇರಿ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ಗಳಿದ್ದು, ಈ ಪೈಕಿ 14,771 ಅನರ್ಹ ಪಡಿತರ ಚೀಟಿಗಳನ್ನ ಗುರುತಿಸಲಾಗಿದೆ.
ಹಾವೇರಿ, (ಸೆಪ್ಟೆಂಬರ್ 28): 1 ಲಕ್ಷ 20 ಸಾವಿರ ಆದಾಯ ಹೊಂದಿದ ಕುಟುಂಬ, ತೆರಿಗೆ ಹಾಗೂ 7 ಎಕರೆ ಗೂ ಅಧಿಕ ಜಮೀನು ಹೊಂದಿರೋ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸರ್ಕಾರ ಆದೇಶ ಮಾಡಿದೆ. ಪಡಿತರ ಅಂಗಡಿಗಳ ಮುಂದೆ ನೋಟಿಸ್ ಹಾಕಿ ದಾಖಲೆಗಳನ್ನ ನೀಡಲು ಸೂಚನೆ ನೀಡಿದೆ. ಇದರಿಂದ ಬಡಕುಟುಂಬಗಳು ಕಂಗಲಾಗಿದ್ದು, ಸರ್ಕಾರ ಮರುಪರಿಶೀಲನೆ ಮಾಡಿ ಅನರ್ಹ ಮಾಡಬೇಕು. ಹಾವೇರಿ ಜಿಲ್ಲೆಯಲ್ಲಿಯೇ 14 ಸಾವಿರಕ್ಕೂ ಅಧಿಕ ಕಾರ್ಡ್ ರದ್ದು ಮಾಡಲು ಆದೇಶ ಮಾಡಲಾಗಿದೆ. ಒಟ್ಟು ಹಾವೇರಿ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ಗಳಿದ್ದು, ಈ ಪೈಕಿ 14,771 ಅನರ್ಹ ಪಡಿತರ ಚೀಟಿಗಳನ್ನ ಗುರುತಿಸಲಾಗಿದೆ.
