Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ಬಿಜೆಪಿ ಶಾಸಕರು ಅಮಾನತು:  ಕೈಕಾಲು ಹಿಡ್ದು ಮುನಿರತ್ನನನ್ನ ಹೊರಹಾಕಿದ ಮಾರ್ಷಲ್ಸ್​

18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನನ್ನ ಹೊರಹಾಕಿದ ಮಾರ್ಷಲ್ಸ್​

ರಮೇಶ್ ಬಿ. ಜವಳಗೇರಾ
|

Updated on: Mar 21, 2025 | 5:33 PM

ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದ್ದಾರೆಂದು ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ವಿಧಾನಸಭೆ ಕಲಾಪದಿಂದ ಸಸ್ಪೆಂಡ್‌ ಮಾಡಿ ಸ್ಪೀಕರ್‌ ರೂಲಿಂಗ್‌ ಹೊರಡಿಸಿದರು. ಬಳಿಕ ಮಾರ್ಷಲ್ಸ್​​, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು. ಇನ್ನು ಸ್ಫೀಕರ್ ಅವರ ಈ ಕ್ರಮಕ್ಕೆ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇನ್ನು ಮಾರ್ಷಲ್ಸ್​ ಹೇಗೆ ಎತ್ತಿಕೊಂಡು ಹೊರಹಾಕುತ್ತಿದ್ದಾರೆ ನೋಡಿ.

ಬೆಂಗಳೂರು, (ಮಾರ್ಚ್ 21): ಕಲಾಪದಲ್ಲಿ ಭಾರಿ ಗದ್ದಲ ಎಬ್ಬಿಸಿ ಸ್ಪೀಕರ್​ ಪೀಠಕ್ಕೆ ಅಗೌರ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆ. ಹನಿಟ್ರ್ಯಾಪ್‌ (Honey Trap) ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರಿಂದು ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್‌ ಖಾದರ್‌ ಮೇಲೆ ಪೇಪರ್‌ ಎಸೆದು ಸಿಟ್ಟು ಹೊರ ಹಾಕಿದರು. ಇದರಿಂದ ಅಸಮಾಧಾನಗೊಂಡ ಸ್ಪೀಕರ್‌ ಯುಟಿ ಖಾದರ್​ ಕಲಾಪವನ್ನು ಅಲ್ಪ ಸಮಯ ಮುಂದೂಡಿದರು. ಬಳಿಕ ಮಧ್ಯಾಹ್ನದ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದ್ದಾರೆಂದು ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ಸಸ್ಪೆಂಡ್‌ ಮಾಡಿ ಸ್ಪೀಕರ್‌ ರೂಲಿಂಗ್‌ ಹೊರಡಿಸಿದರು. ಬಳಿಕ ಮಾರ್ಷಲ್ಸ್​​, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು.