AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​?

ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​?

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jan 21, 2026 | 3:28 PM

Share

ಧಾರವಾಡ ಹೊರವಲಯದಲ್ಲಿ 19 ವರ್ಷದ ಜಕಿಯಾ ಮುಲ್ಲಾ ಎಂಬ ಯುವತಿಯ ಶವ ಪತ್ತೆಯಾಗಿದೆ. ಮನೆಯಿಂದ ಹೊರ ಹೋಗಿದ್ದ ಯುವತಿ ಮರುದಿನ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿ ಮರತದೇಹ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಎರಡು ಠಾಣೆಗಳ ವ್ಯಾಪ್ತಿಯ ಬಗ್ಗೆ ಗೊಂದಲ ಹಿನ್ನೆಲೆ ಧಾರವಾಡ ಗ್ರಾಮೀಣ ಮತ್ತು ವಿದ್ಯಾಗಿರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ, ಜನವರಿ 21: ನಗರದ ಹೊರವಲಯದಲ್ಲಿ ಯುವತಿಯೋರ್ವಳ ಶವ (Dead Body)  ಪತ್ತೆಯಾಗಿದ್ದು, ಮೃತಳನ್ನು ಗಾಂಧಿ ಚೌಕ್ ಬಡಾವಣೆ ನಿವಾಸಿ ಝಕಿಯಾ ಮುಲ್ಲಾ(19) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ ಝಕಿಯಾ ಮುಲ್ಲಾ ಇಂದು ಮನಸೂರು ರಸ್ತೆಯ ವಿನಯ್ ಡೈರಿ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಹತ್ಯೆ ಮಾಡಿ ಯುವತಿ ಶವ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿವಿಲ್ ಆಸ್ಪತ್ರೆ ಮುಂದೆ ಕುಟುಂಬ ಮತ್ತು ಸಂಬಂಧಿಕರ ಆಕ್ರೋಶ ಮುಗಿಲು ಮುಟ್ಟಿದ್ದು, ಯಾರೋ ಕರೆದುಕೊಂಡು ಹೋಗಿಯೇ ಕೊಲೆ ಮಾಡಿದ್ದಾರೆ. ಆರೋಪಿಯನ್ನು ಪತ್ತೆ ಮಾಡಿ ಶೂಟೌಟ್ ಮಾಡಬೇಕು ಎಂದು ಆಗ್ರಹಿಸಲಾಗಿದೆ. ಝಕಿಯಾ ತಂದೆ ಯೂನುಸ್ ರಿಯಲ್ ಎಸ್ಟೇಟ್ ಬ್ರೋಕರ್ ಆಗಿದ್ದು, ನಿನ್ನೆ ಸಂಜೆ ಮನೆಯಿಂದ ಹೊರ ಹೋಗಿದ್ದ ಝಕಿಯಾ ಮುಲ್ಲಾ ಮರಳಿ ಬಾರದ ಹಿನ್ನೆಲೆ ಕುಟುಂಬಸ್ಥರು ದೂರು ನೀಡಿದ್ದರು. ಧಾರವಾಡ ಸಾಧನಕೇರಿ ನಿವಾಸಿಯಾಗಿರೋ ಯುವಕನ ಜೊತೆ ಮುಂದಿನ ತಿಂಗಳು ಝಕಿಯಾ ನಿಶ್ಚಿತಾರ್ಥಕ್ಕೂ ಕುಟುಂಬ ತಯಾರಿ ನಡೆಸಿತ್ತು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More