ಪಾಕಿಸ್ತಾನದ ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ

Updated on: May 21, 2025 | 9:58 PM

ಸಿಂಧ್‌ನಲ್ಲಿ ಜಲ ವಿವಾದದ ಹಿಂಸಾಚಾರದ ನಂತರ ಪಾಕಿಸ್ತಾನ ಸಚಿವರ ಮನೆಗೆ ಬೆಂಕಿ ಹಚ್ಚಲಾಗಿದೆ. ಸಿಂಧ್‌ನ ಗೃಹ ಸಚಿವ ಜಿಯಾ-ಉಲ್-ಹಸನ್ ಲಂಜಾರ್ ಅವರ ಮನೆಗೆ ಕೋಪಗೊಂಡ ಪ್ರತಿಭಟನಾಕಾರರು ಬೆಂಕಿ ಹಚ್ಚಿದಾಗ ಪರಿಸ್ಥಿತಿ ಉಲ್ಬಣಗೊಂಡಿತು. ಈ ಆಘಾತಕಾರಿ ಘಟನೆಯು ಸರ್ಕಾರದ ಭದ್ರತೆಯ ನಿರ್ವಹಣೆ ಮತ್ತು ಸಾರ್ವಜನಿಕ ಕೋಪದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತು.

ಸಿಂಧ್, ಮೇ 21: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಸೇನಾ ಬೆಂಬಲಿತ ಸಿಂಧೂ ಕಾಲುವೆ ಯೋಜನೆಯನ್ನು ವಿರೋಧಿಸಿ ಪ್ರತಿಭಟನಾಕಾರರು ಬೀದಿಗಿಳಿದಿದ್ದರಿಂದ ಉದ್ವಿಗ್ನತೆ ಹೆಚ್ಚಾಯಿತು. ಈ ಯೋಜನೆಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಇದರಿಂದ ಕೋಪಗೊಂಡ ಪ್ರತಿಭಟನಾಕಾರರು ಹಿಂಸಾತ್ಮಕ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದು, ಪಾಕಿಸ್ತಾನದ ಸಿಂಧ್‌ನ ಗೃಹ ಸಚಿವ ಜಿಯಾ-ಉಲ್-ಹಸನ್ ಲಂಜಾರ್ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.ಸಿಂಧಿ ರಾಷ್ಟ್ರೀಯತಾವಾದಿ ಪಕ್ಷವಾದ ಜೈ ಸಿಂಧ್ ಮುತ್ತಹಿದಾ ಮಹಾಜ್ (ಜೆಎಸ್‌ಎಂಎಂ) ನ ಕಾರ್ಯಕರ್ತ ಜಾಹಿದ್ ಲಘರಿ ಅವರನ್ನು ಪೊಲೀಸರು ಗುಂಡಿಕ್ಕಿ ಕೊಂದರು. ಇದರಿಂದ ಉತ್ತರ ಸಿಂಧ್‌ನ ನೌಶಾಹ್ರೋ ಫಿರೋಜ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಹಿಂಸಾತ್ಮಕವಾಗಿ ವರ್ತಿಸಿದರು.

ಪಾಕಿಸ್ತಾನದ ಪಂಜಾಬ್‌ಗೆ ನೀರು ಸರಬರಾಜು ಹೆಚ್ಚಿಸಲು ಸಿಂಧೂ ನದಿಯಿಂದ ನೀರನ್ನು ಬೇರೆಡೆಗೆ ತಿರುಗಿಸಲು ಸರ್ಕಾರ ಕಾಲುವೆ ನಿರ್ಮಿಸಲು ಯೋಜಿಸುತ್ತಿದೆ. ಆದರೆ ಸಿಂಧ್‌ನ ಸ್ಥಳೀಯರು ಈ ಯೋಜನೆಯು ತಮ್ಮ ಕೃಷಿಭೂಮಿ ಮತ್ತು ನೀರಿನ ಮೂಲಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಈ ಯೋಜನೆಯು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More