ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

Edited By:

Updated on: Mar 16, 2026 | 6:39 PM

ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ ಬಾ ನಗರದಲ್ಲಿ ನಡೆದಿದೆ. ಕಸ್ತೂರ ಬಾ ನಗರದ ಬಾಲೆ ಭುವಿ(2) ಬದಕುಳಿದ ಮಗು. ಆಟವಾಡುತ್ತ ಭುವಿ ಏಕಾಏಕಿ ನಾಪತ್ತೆಯಾಗಿದ್ದ. ಇದರಿಂದ ಆತಂಕಗೊಂಡು ಮನೆ ಸುತ್ತಮುತ್ತ ಹುಡುಕಿದರೂ ಪತ್ತೆಯಾಗಿಲ್ಲ. ಕೊನೆಗೆ ಮನೆಯ ಮುಂದಿನ ಬಾವಿಯಲ್ಲಿ ನೋಡಿದಾಗ ಮಗು ಅಳುವ ಶಬ್ದ ಕೇಳಿದೆ.

ಕಾರವಾರ, (ಮಾರ್ಚ್ 16): ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ ಬಾ ನಗರದಲ್ಲಿ ನಡೆದಿದೆ. ಕಸ್ತೂರ ಬಾ ನಗರದ ಬಾಲೆ ಭುವಿ(2) ಬದಕುಳಿದ ಮಗು. ಆಟವಾಡುತ್ತ ಭುವಿ ಏಕಾಏಕಿ ನಾಪತ್ತೆಯಾಗಿದ್ದ. ಇದರಿಂದ ಆತಂಕಗೊಂಡು ಮನೆ ಸುತ್ತಮುತ್ತ ಹುಡುಕಿದರೂ ಪತ್ತೆಯಾಗಿಲ್ಲ. ಕೊನೆಗೆ ಮನೆಯ ಮುಂದಿನ ಬಾವಿಯಲ್ಲಿ ನೋಡಿದಾಗ ಮಗು ಅಳುವ ಶಬ್ದ ಕೇಳಿದೆ. ಕೂಡಲೇ ಬ್ಯಾಟರಿ ಬಿಟ್ಟು ನೋಡಿದಾಗ ಮಗು ಬಾವಿಯೊಳಗೆ ಪೈಪ್​​​ಗೆ ಸಿಲುಕಿರುವುದು ಕಂಡುಬಂದಿದ್ದು, ತಕ್ಷಣವೇ ಪಯ್ಯ ಚವಟಿ ಎಂಬ ವ್ಯಕ್ತಿ ಬಾವಿಗೆ ಇಳಿದು ಮಗುವನ್ನ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More