ಬಿಹಾರದ ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು 25 ಜನ ಸಾವು; ಸಿಎಂ ನಿತೀಶ್ ಕುಮಾರ್ ಪರಿಹಾರ ಘೋಷಣೆ
ಕೆಟ್ಟ ಹವಾಮಾನದ ಸಂದರ್ಭದಲ್ಲಿ ಜನರು ಮನೆಯೊಳಗೆ ಮತ್ತು ಸುರಕ್ಷಿತವಾಗಿರಲು ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮನವಿ ಮಾಡಿದ್ದಾರೆ. ಬಿಹಾರದ ನಾಲ್ಕು ಜಿಲ್ಲೆಗಳಾದ ಬೇಗುಸರಾಯ್, ದರ್ಭಂಗಾ, ಮಧುಬನಿ ಮತ್ತು ಸಮಷ್ಟಿಪುರದಲ್ಲಿ ಸಿಡಿಲು ಬಡಿದು ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾವುಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಎಲ್ಲಾ ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪಾಟ್ನಾ, ಏಪ್ರಿಲ್ 10: ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಸಿಡಿಲು ಮತ್ತು ಆಲಿಕಲ್ಲು ಮಳೆಗೆ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಇದರಿಂದ ಹಲವಾರು ಜನರು ಗಾಯಗೊಂಡಿದ್ದಾರೆ. ಬಿಹಾರದ (Bihar) ನಳಂದದಲ್ಲಿ 18 ಸಾವುಗಳು ಸಂಭವಿಸಿವೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ತಿಳಿಸಿದೆ. ಸಿವಾನ್ನಲ್ಲಿ ಇಬ್ಬರು, ಕಟಿಹಾರ್, ದರ್ಭಂಗಾ, ಬೇಗುಸರಾಯ್, ಭಾಗಲ್ಪುರ್ ಮತ್ತು ಜೆಹಾನಾಬಾದ್ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ (CM Nitish Kumar) ಈ ಸಾವಿಗೆ ಸಂತಾಪ ಸೂಚಿಸಿದ್ದು, ಮೃತರ ಸಂಬಂಧಿಕರಿಗೆ ತಲಾ 4 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ

