Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಹಿಮಪಾತದಲ್ಲಿ ಇನ್ನೂ 3 ಶವಗಳು ಪತ್ತೆ

ಉತ್ತರಾಖಂಡದ ಹಿಮಪಾತದಲ್ಲಿ ಇನ್ನೂ 3 ಶವಗಳು ಪತ್ತೆ

ಸುಷ್ಮಾ ಚಕ್ರೆ
|

Updated on: Mar 02, 2025 | 5:00 PM

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಭೀಕರ ಹಿಮಪಾತ ಸಂಭವಿಸಿದ್ದು, ಗಡಿ ರಸ್ತೆಗಳ ಸಂಸ್ಥೆಯ (ಬಿಆರ್‌ಒ) ಶಿಬಿರ ಸಮಾಧಿಯಾಗಿದೆ. ಈ ಹಿಮಪಾತದಲ್ಲಿ ಹಲವಾರು ಕಾರ್ಮಿಕರು ಹಿಮದ ಕೆಳಗೆ ಸಿಲುಕಿದ್ದಾರೆ. ಮಾನಾ ಗ್ರಾಮದಲ್ಲಿ ಹಿಮಪಾತ ಪೀಡಿತ ಸ್ಥಳದಿಂದ ಕನಿಷ್ಠ 50 ಕಾರ್ಮಿಕರನ್ನು ರಕ್ಷಿಸಲಾಯಿತು. ಆದರೆ ಅವರಲ್ಲಿ ನಾಲ್ವರು ಗಾಯಗೊಂಡು ಸಾವನ್ನಪ್ಪಿದರು.

ಚಮೋಲಿ (ಮಾರ್ಚ್ 2): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಭಾರೀ ಹಿಮಪಾತ ಸಂಭವಿಸಿದ ನಂತರ ಇಂದು 3 ಶವಗಳು ಪತ್ತೆಯಾಗಿವೆ. ಒಬ್ಬ ಕಾರ್ಮಿಕ ಇನ್ನೂ ಕಾಣೆಯಾಗಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ. ಈ ಘಟನೆಯಿಂದ ಸಾವಿನ ಸಂಖ್ಯೆ 7ಕ್ಕೆ ಏರಿದೆ. ಹಿಮಪಾತ ಸಂಭವಿಸಿದಾಗ ಸ್ಥಳದಲ್ಲಿ 54 ಕಾರ್ಮಿಕರಿದ್ದರು. ಇದೀಗ ಹಿಮಪಾತದಲ್ಲಿ ಸಿಲುಕಿರುವ ಕೊನೆಯ ವ್ಯಕ್ತಿಗಾಗಿ ಸೇನೆಯಿಂದ ಹುಡುಕಾಟ ನಡೆಸಲಾಗುತ್ತಿದೆ. ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಯುಎಸ್‌ಡಿಎಂಎ) ಪ್ರಕಾರ, ಐವರು ಕಾರ್ಮಿಕರು ಈ ಹಿಂದೆ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಅವರಲ್ಲಿ ಒಬ್ಬರಾದ ಹಿಮಾಚಲ ಪ್ರದೇಶದ ಕಾಂಗ್ರಾದ ಸುನಿಲ್ ಕುಮಾರ್ ತಾನಾಗಿಯೇ ಸುರಕ್ಷಿತವಾಗಿ ಮನೆಗೆ ತಲುಪಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ