ಈಜುಕೊಳದಲ್ಲಿ ಮುಳುಗಿ ಪ್ರಾಣಬಿಟ್ಟ ಮೂವರು ಯುವತಿಯರ ಕೊನೆ ಕ್ಷಣ ಹೇಗಿತ್ತು? ವಿಡಿಯೋ ನೋಡಿ

Updated on: Nov 17, 2024 | 4:19 PM

ವೀಕೆಂಡ್​ ಎಂಜಾಯ್​ ಮಾಡೋಕೆ ಅಂತ ಮಂಗಳೂರಿಗೆ ಹೋದವರು ಹೆಣವಾಗಿದ್ದಾರೆ. ಸಮುದ್ರತೀರದ ಬೀಚ್​​ ರೆಸಾರ್ಟ್​​ನಲ್ಲಿ ನಿನ್ನೆ ಚೆಕ್​ ಇನ್​ ಆದವರು, ಚೆಕ್​ಔಟ್​ ಆಗಿದ್ದು ಹೆಣವಾಗಿ. ಅಷ್ಟಕ್ಕೂ ಆ ರೆಸಾರ್ಟ್​​ನಲ್ಲಿ ಆಗಿದ್ದೇನು? ಈಜುಕೊಳದಲ್ಲಿ ಮುಳುಗಿ ಪ್ರಾಣಬಿಟ್ಟ ಮೂವರು ಯುವತಿಯರ ಕೊನೇ ಕ್ಷಣ ಹೇಗಿತ್ತು? ವಿಡಿಯೋ ನೋಡಿ.

ಮಂಗಳೂರು, (ನವೆಂಬರ್ 17): ಇದು ಈ ಮೂವರು ಯುವತಿಯರ ಕೊನೆಯ ಕ್ಷಣದ ದೃಶ್ಯಗಳು.. ಒಬ್ಬಳನ್ನು ಕಾಪಾಡಲು ಹೋದ ಮತ್ತೊಬ್ಬಳು, ಆ ಇಬ್ಬರ ರಕ್ಷಣೆಗೆ ಹೋದ ಇನ್ನೊಬ್ಬಳು.. ಹೀಗೆ ಮೂವರೂ ಈಜುಕೊಳದ ನೀರಿನಲ್ಲಿ ಕಾಪಾಡಿ ಕಾಪಾಡಿ ಅಂತಾ ಕಿರುಚಾಡುತ್ತಾ ಪ್ರಾಣಬಿಟ್ಟ ದುರಂತ ದೃಶ್ಯಗಳಿವು. ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರದ ಉಚ್ಚಿಲದ ಬಳಿಯ ಸಮುದ್ರ ತೀರದಲ್ಲೊಂದು ರೆಸಾರ್ಟ್. ವೀಕೆಂಡ್ ಎಂಜಾಯ್​ ಮಾಡೋಕೆ ಇದಕ್ಕಿಂತ ಬೇರೆ ಜಾಗ ಬೇಕಿರಲಿಲ್ಲ. ನಿನ್ನೆ (ನವೆಂಬರ್ 16) ಮೂವರು ಮೈಸೂರು ಮೂಲದ ಯುವತಿಯರು ಇದೇ ಜಾಗಕ್ಕೆ ಬಂದಿದ್ದಾರೆ. ಆದ್ರೆ ಹಾಗೆ ಬಂದವರು ಮತ್ತೆ ವಾಪಾಸ್ ಹೋಗಲೇ ಇಲ್ಲ. ಈಜುಕೊಳದ ನೀರಿನಲ್ಲಿ ಉಸಿರು ಚೆಲ್ಲಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಗೆ ಮೂವರು ಯುವತಿಯರು ರೆಸಾರ್ಟ್​ನ ಈಜುಕೊಳಕ್ಕಿಳಿದಿದ್ದಾರೆ. ಹೀಗೆ ಇಳಿದ ಮೂವರ ಪೈಕಿ ಒಬ್ಬಳು ಸ್ವಿಮ್ಮಿಂಗ್ ಪೂಲ್​ನಲ್ಲೇ ಇದ್ದ ಟ್ಯೂಬ್ ತರಲು ತೆರಳಿದ್ದಾಳೆ. ಆದ್ರೆ ಆಳ ಇದ್ದ ಕಾರಣ ಟ್ಯೂಬ್ ತಾರದೆ ವಾಪಸ್ ಆಗಿದ್ದಳು. ಹೀಗೆ ವಾಪಸ್ ಬಂದ ಯುವತಿ ತನ್ನಿಬ್ಬರು ಸ್ನೇಹಿತರಿದ್ದ ಕಡೆ ಬರ್ತಾಳೆ. ಆದ್ರೆ ಅದೇನಾಯ್ತೋ ಏನೋ ಮತ್ತೆ ಎಡಭಾಗದತ್ತ ಒಂದು ಹೆಜ್ಜೆ ಇಡ್ತಿದ್ದಂತೆ ಆಯತಪ್ಪಿದ್ದಾಳೆ. ಅಪಾಯವನ್ನು ಅರಿತ ಪಕ್ಕದಲ್ಲಿದ್ದ ಯುವತಿ ರಕ್ಷಣೆಗೆ ಧಾವಿಸಿದ್ದಾಳೆ. ತನ್ನ ಗೆಳತಿಯ ರಕ್ಷಣೆಗೆ ಅಂತಾ ಕೈಚಾಚಿದ ಎರಡನೇ ಯುವತಿ ಕೂಡಾ ನೋಡನೋಡ್ತಿದ್ದಂತೆ ಆಳಕ್ಕೆ ಜಾರಿಹೋಗ್ತಾಳೆ. ಹೀಗೆ ಓರ್ವ ಗೆಳತಿಯ ರಕ್ಷಣೆ ಹೋಗಿದ್ದ ಇಬ್ಬರು ಸೇರಿದಂತೆ ಮೂವರು ಯುವತಿ ದುರಂತ ಅಂತ್ಯಕಂಡಿದ್ದಾರೆ.

ಇದನ್ನೂ ಓದಿ: ರೆಸಾರ್ಟ್​ನ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ದುರ್ಮರಣ

Published on: Nov 17, 2024 03:53 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More