ಜನರಿಂದ ತುಂಬಿರುವ ಮಾರ್ಕೆಟ್​ನಲ್ಲಿ 5ನೇ ಮಹಡಿಯಿಂದ ನಾಯಿ ಬಿದ್ದು 3 ವರ್ಷದ ಬಾಲಕಿ ಸಾವು

ಜನರಿಂದ ತುಂಬಿರುವ ಮಾರುಕಟ್ಟೆಯಲ್ಲಿ ನಾಯಿಯೊಂದು ಐದನೇ ಮಹಡಿಯಿಂದ ಮೂರು ವರ್ಷದ ಬಾಲಕಿ ಮೇಲೆ ಬಿದ್ದ ಪರಿಣಾಮ ಬಾಲಕಿ ಮೃತಪಟ್ಟಿದ್ದು, ನಾಯಿಗೂ ಗಾಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುಟ್ಟ ಬಾಲಕಿ ತಾಯಿಯ ಕೈ ಹಿಡಿದುಕೊಂಡು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಳು, ಮೊದಲು ತಾಯಿಯ ಪಕ್ಕದಲ್ಲಿದ್ದ ಆಕೆ ಬಳಿಕ ತಾಯಿಯ ಹಿಂದಿದ್ದಳು, ಆ ಸಮಯದಲ್ಲಿ ಮೇಲಿನಂದ ನಾಯಿ ಬಾಲಕಿ ಮೇಲೆ ಬಿದ್ದಿದೆ. ಕೂಡಲೇ ಆಕೆ ಪ್ರಜ್ಞೆ ಕಳೆದುಕೊಂಡಿದ್ದಳು. ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಜನರಿಂದ ತುಂಬಿರುವ ಮಾರ್ಕೆಟ್​ನಲ್ಲಿ 5ನೇ ಮಹಡಿಯಿಂದ ನಾಯಿ ಬಿದ್ದು 3 ವರ್ಷದ ಬಾಲಕಿ ಸಾವು
|

Updated on: Aug 08, 2024 | 9:10 AM

ಸಾವು ಹೀಗೂ ಬರಬಹುದು, ಅದು ಜನರಿಂದ ತುಂಬಿ ತುಳುಕುತ್ತಿರುವ ಮಾರುಕಟ್ಟೆ. ಥಾಣೆಯಲ್ಲಿರುವ ಮುಂಬ್ರಾದ ಅಮೃತ್​ನಗರದಲ್ಲಿ ತಾಯಿಯ ಕೈ ಹಿಡಿದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ಐದನೇ ಮಹಡಿಯಿಂದ ನಾಯಿ ಬಿದ್ದ ಪರಿಣಾಮ ತಕ್ಷಣವೇ ಬಾಲಕಿ ಮೃತಪಟ್ಟಿದ್ದಾಳೆ.

ಅಮೃತ್ ನಗರದಲ್ಲಿನ ಚಿರಾಗ್ ಮೇಸನ್ ಕಟ್ಟಡದಿಂದ ನಾಯಿ ಬಿದ್ದು ಬಾಲಕಿಯ ಸಾವಿಗೆ ಕಾರಣವಾಯಿತು. ಅಮೃತ್ ನಗರದ ಚಿರಾಗ್ ಮ್ಯಾನ್ಷನ್ ನ ಟೆರೇಸ್ ಮೇಲಿದ್ದ ನಾಯಿ ತನ್ನ ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯ ಮೇಲೆ ಏಕಾಏಕಿ ಬಿದ್ದಿದೆ. ನಾಯಿಯ ಮಾಲೀಕ ಝೈದ್ ಸೈಯದ್ ಎಂಬುವವರಾಗಿದ್ದಾರೆ.

ತಾಯಿ ಬಾಲಕಿಯನ್ನು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ವೇಳೆ ಆಕೆ ಮೃತಪಟ್ಟಿದ್ದಾಳೆ ಎಂದು ವಿಡಿಯೋ ಕ್ಲಿಪ್ ತೋರಿಸಿದೆ. ಈ ಘಟನೆಯಲ್ಲಿ ನಾಯಿ (ಗೋಲ್ಡನ್ ರಿಟ್ರೈವರ್) ಸಹ ಗಾಯಗೊಂಡಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ನಾಯಿ ಬಾಲಕಿ ಮೇಲೆ ಬಿದ್ದಾಗ, ಆಕೆ ಸಂಪೂರ್ಣವಾಗಿ ಪ್ರಜ್ಞಾಹೀನಳಾದಳು. ನಾಯಿ ಕೂಡ ಕೆಲಕಾಲ ಪ್ರಜ್ಞೆ ತಪ್ಪಿತ್ತಾದರೂ ನಂತರ ಎದ್ದು ನಿಂತಿತು. ಗಾಯಗೊಂಡ ನಾಯಿಯನ್ನೂ ಚಿಕಿತ್ಸೆಗಾಗಿ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ನಾಯಿ ಆಕಸ್ಮಿಕವಾಗಿ ಬಿದ್ದಿದೆಯೇ ಅಥವಾ ಉದ್ದೇಶಪೂರ್ವಕವಾಗಿ ಎಸೆಯಲಾಗಿದೆಯೇ ಎಂದು ತಿಳಿಯಲು ಮುಂಬ್ರಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow us
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್