ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿರುವ ‘ವಿಕ್ರಾಂತ್ ರೋಣ’ (Vikrant Rona) ಚಿತ್ರವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. 3ಡಿಯಲ್ಲಿ ಈ ಚಿತ್ರ ಮೂಡಿಬಂದಿದೆ ಎಂಬ ಕಾರಣಕ್ಕೆ ಹೆಚ್ಚು ಹೈಪ್ ಕ್ರಿಯೇಟ್ ಮಾಡಿತ್ತು. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ದಾವಣಗೆರೆಯ (Davanagere) ‘ತ್ರಿನೇತ್ರ’ ಚಿತ್ರಮಂದಿರದಲ್ಲಿ ಸರಿಯಾಗಿ 3ಡಿ ದೃಶ್ಯಗಳು ಬಿತ್ತರ ಆಗಿಲ್ಲ. ಇದರಿಂದ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ನಿರಾಸೆ ಆಗಿದೆ. ಈ ರೀತಿ ಅಡಚಣೆ ಆಗಿದ್ದಕ್ಕಾಗಿ ಚಿತ್ರಮಂದಿರದ ಮಾಲೀಕರ ವಿರುದ್ಧ ಸುದೀಪ್ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದರು. ನಂತರ ಎಚ್ಚೆತ್ತುಕೊಂಡ ಸಿಬ್ಬಂದಿ ವರ್ಗದವರು ಸಮಸ್ಯೆ ಬಗೆಹರಿಸಿದರು.
Published On - 9:29 am, Thu, 28 July 22