ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ಆರಂಭವಾಗಿದ್ದು, ಮೂರನೇ ದಿನಕ್ಕೆ ಕಾಲಿಟ್ಟಿದೆ. ಎರಡನೇ ದಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಹರಗಣ ವಿಚಾರವಾಗಿ ವಿಪಕ್ಷಗಳು ಸರ್ಕಾರದ ಮೇಲೆ ಮುಗಿದ್ದವು. ಮೂರನೇ ದಿನವಾದ ಇಂದು (ಜುಲೈ.18) ಅಧಿವೇಶನ ಆರಂಭವಾಗಿದೆ. ಅಧಿವೇಶನ ಆರಂಭದಲ್ಲೇ ಜಿಟಿ ಮಾಲ್ ವಿಚಾರವಾಗಿ ಚರ್ಚೆ ನಡೆಯಿತು. ಬೆಂಗಳೂರಿನ ಜಿಟಿ ಮಾಲ್ ಒಳಗಡೆ ಓರ್ವ ರೈತನನ್ನು ಬಿಡದೆ ಇರುವ ವಿಚಾರವಾಗಿ ಚರ್ಚೆ ನಡೆದಿದೆ. ಅಲ್ಲದೆ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯವರ ಹಣ ಗ್ಯಾರೆಂಟಿಗೆ ಬಳಕೆ ಮಾಡಿರುವ ವಿಚಾರವಾಗಿ ವಿರೋಧ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸಿದವು.
Published On - 11:25 am, Thu, 18 July 24