ಹಿಂಸಾಚಾರಕ್ಕೆ ತಿರುಗಿದ ಲಡಾಖ್ ಪ್ರತಿಭಟನೆ; 4 ಮಂದಿ ಸಾವು, 70 ಜನರಿಗೆ ಗಾಯ
ಸೆಪ್ಟೆಂಬರ್ 10ರಿಂದ ಸೋನಮ್ ವಾಂಗ್ಚುಕ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 15 ಜನರಲ್ಲಿ ಇಬ್ಬರನ್ನು ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದಾದ ನಂತರ ಬಂದ್ಗೆ ಕರೆ ನೀಡಲಾಗಿದೆ. ಅಶಾಂತಿಯ ನಂತರ, ಲೇಹ್ ಲಡಾಖ್ನಲ್ಲಿ ಕೇಂದ್ರ ಆಡಳಿತವು ಭಾರತೀಯ ನಾಗರಿಕ್ ಸುರಕ್ಷಾ ಸಂಹಿತಾ (BNSS), 2023ರ ಸೆಕ್ಷನ್ 163 ರ ಅಡಿಯಲ್ಲಿ ಕರ್ಫ್ಯೂ ವಿಧಿಸಿತು. ಹೀಗಾಗಿ, ಈ ಭಾಗದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ.
ಲಡಾಖ್, ಸೆಪ್ಟೆಂಬರ್ 24: ಲಡಾಖ್ಗೆ ರಾಜ್ಯ ಸ್ಥಾನಮಾನವನ್ನು ನೀಡಲು ಒತ್ತಾಯಿಸಿ ನಡೆಸಿದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಇಂದು 4 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಾಧ್ಯವಾಗದೆ ಲಡಾಖ್ (Ladakh) ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಇಂದಿನ ಗಲಭೆಯ ವೇಳೆ ಸ್ಥಳೀಯ ಬಿಜೆಪಿ ಕಚೇರಿಗೆ ಕೂಡ ಬೆಂಕಿ ಹಚ್ಚಲಾಯಿತು. ಪ್ರತಿಭಟನಾಕಾರರು ಬೆಂಕಿ ಹಚ್ಚಿ ವಾಹನವನ್ನು ಸಹ ಸುಟ್ಟುಹಾಕಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿದರು.
ಅಶಾಂತಿಯ ನಂತರ, ಲೇಹ್ ಲಡಾಖ್ನಲ್ಲಿ ಕೇಂದ್ರ ಆಡಳಿತವು ಭಾರತೀಯ ನಾಗರಿಕ್ ಸುರಕ್ಷಾ ಸಂಹಿತಾ (BNSS), 2023ರ ಸೆಕ್ಷನ್ 163 ರ ಅಡಿಯಲ್ಲಿ ಕರ್ಫ್ಯೂ ವಿಧಿಸಿತು. ಹೀಗಾಗಿ, ಈ ಭಾಗದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಲೇಹ್ನಲ್ಲಿ ಪೂರ್ವ ಲಿಖಿತ ಅನುಮೋದನೆಯಿಲ್ಲದೆ ಯಾವುದೇ ಮೆರವಣಿಗೆ, ರ್ಯಾಲಿ ಅಥವಾ ಮೆರವಣಿಗೆ ನಡೆಸಬಾರದು ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್ಪೆಕ್ಟರ್ ಧನಂಜಯ್ನ ಸಸ್ಪೆಂಡ್ ಮಾಡೋಕ್ಕಾಗಲ್ಲ

