ಹಿಂಸಾಚಾರಕ್ಕೆ ತಿರುಗಿದ ಲಡಾಖ್‌ ಪ್ರತಿಭಟನೆ; 4 ಮಂದಿ ಸಾವು, 70 ಜನರಿಗೆ ಗಾಯ

Updated on: Sep 24, 2025 | 5:41 PM

ಸೆಪ್ಟೆಂಬರ್ 10ರಿಂದ ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 15 ಜನರಲ್ಲಿ ಇಬ್ಬರನ್ನು ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದಾದ ನಂತರ ಬಂದ್‌ಗೆ ಕರೆ ನೀಡಲಾಗಿದೆ. ಅಶಾಂತಿಯ ನಂತರ, ಲೇಹ್ ಲಡಾಖ್‌ನಲ್ಲಿ ಕೇಂದ್ರ ಆಡಳಿತವು ಭಾರತೀಯ ನಾಗರಿಕ್ ಸುರಕ್ಷಾ ಸಂಹಿತಾ (BNSS), 2023ರ ಸೆಕ್ಷನ್ 163 ರ ಅಡಿಯಲ್ಲಿ ಕರ್ಫ್ಯೂ ವಿಧಿಸಿತು. ಹೀಗಾಗಿ, ಈ ಭಾಗದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ.

ಲಡಾಖ್, ಸೆಪ್ಟೆಂಬರ್ 24: ಲಡಾಖ್​​ಗೆ ರಾಜ್ಯ ಸ್ಥಾನಮಾನವನ್ನು ನೀಡಲು ಒತ್ತಾಯಿಸಿ ನಡೆಸಿದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಇಂದು 4 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಾಧ್ಯವಾಗದೆ ಲಡಾಖ್ (Ladakh) ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಇಂದಿನ ಗಲಭೆಯ ವೇಳೆ ಸ್ಥಳೀಯ ಬಿಜೆಪಿ ಕಚೇರಿಗೆ ಕೂಡ ಬೆಂಕಿ ಹಚ್ಚಲಾಯಿತು. ಪ್ರತಿಭಟನಾಕಾರರು ಬೆಂಕಿ ಹಚ್ಚಿ ವಾಹನವನ್ನು ಸಹ ಸುಟ್ಟುಹಾಕಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿದರು.

ಅಶಾಂತಿಯ ನಂತರ, ಲೇಹ್ ಲಡಾಖ್‌ನಲ್ಲಿ ಕೇಂದ್ರ ಆಡಳಿತವು ಭಾರತೀಯ ನಾಗರಿಕ್ ಸುರಕ್ಷಾ ಸಂಹಿತಾ (BNSS), 2023ರ ಸೆಕ್ಷನ್ 163 ರ ಅಡಿಯಲ್ಲಿ ಕರ್ಫ್ಯೂ ವಿಧಿಸಿತು. ಹೀಗಾಗಿ, ಈ ಭಾಗದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಲೇಹ್‌ನಲ್ಲಿ ಪೂರ್ವ ಲಿಖಿತ ಅನುಮೋದನೆಯಿಲ್ಲದೆ ಯಾವುದೇ ಮೆರವಣಿಗೆ, ರ್ಯಾಲಿ ಅಥವಾ ಮೆರವಣಿಗೆ ನಡೆಸಬಾರದು ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More