ಕುಟುಂಬದ ನಾಲ್ವರಿಗೆ ಪಾಸಿಟಿವ್, 7 ಜನರ ಆರೋಗ್ಯ ಏರುಪೇರು: BBMP ಡೊಂಟ್ ಕೇರ್

[lazy-load-videos-and-sticky-control id=”OtmWQYOUIvU”] ಬೆಂಗಳೂರು: ಬಿಬಿಎಂಪಿ ಹಾಗೂ ಆರೊಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಈಗಾಗಲೇ ಬೇಸತ್ತು ಹೋಗಿರುವ ಬೆಂಗಳೂರಿಗರು, ಆಡಳಿತ ವರ್ಗಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದು ಸಾಲಾದೆಂಬಂತೆ ಅಧಿಕಾರಿಗಳ ಎಡವಟ್ಟಿನ ಪುರಾಣ ನಗರದ ಜನರ ನಿದ್ದೆಗೆಡಿಸಿದೆ. ಇದಕ್ಕೆ ತಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಿನ ಕತ್ರಿಗುಪ್ಪೆಯ ಭುವನೇಶ್ವರ ನಗರದ ಒಂದೇ ಮನೆಯಲ್ಲಿ ನಾಲ್ಕು ಜನಕ್ಕೆ ಕೊರೊನಾ ಪಾಸಿಟಿವ್ ಬಂದು ನರಳುತ್ತಿದ್ದು, ಆರೊಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಜೊತೆಗೆ ಮನೆಯನ್ನು ಸ್ಯಾನಿಟೈಸ್ ಮಾಡಿಲ್ಲ. ಮೊದಲು ಇದೇ […]

ಕುಟುಂಬದ ನಾಲ್ವರಿಗೆ ಪಾಸಿಟಿವ್, 7 ಜನರ ಆರೋಗ್ಯ ಏರುಪೇರು: BBMP ಡೊಂಟ್ ಕೇರ್
ಸಾಧು ಶ್ರೀನಾಥ್​

Updated on: Jul 20, 2020 | 6:41 PM

[lazy-load-videos-and-sticky-control id=”OtmWQYOUIvU”]

ಬೆಂಗಳೂರು: ಬಿಬಿಎಂಪಿ ಹಾಗೂ ಆರೊಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಈಗಾಗಲೇ ಬೇಸತ್ತು ಹೋಗಿರುವ ಬೆಂಗಳೂರಿಗರು, ಆಡಳಿತ ವರ್ಗಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದು ಸಾಲಾದೆಂಬಂತೆ ಅಧಿಕಾರಿಗಳ ಎಡವಟ್ಟಿನ ಪುರಾಣ ನಗರದ ಜನರ ನಿದ್ದೆಗೆಡಿಸಿದೆ.

ಇದಕ್ಕೆ ತಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಿನ ಕತ್ರಿಗುಪ್ಪೆಯ ಭುವನೇಶ್ವರ ನಗರದ ಒಂದೇ ಮನೆಯಲ್ಲಿ ನಾಲ್ಕು ಜನಕ್ಕೆ ಕೊರೊನಾ ಪಾಸಿಟಿವ್ ಬಂದು ನರಳುತ್ತಿದ್ದು, ಆರೊಗ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಜೊತೆಗೆ ಮನೆಯನ್ನು ಸ್ಯಾನಿಟೈಸ್ ಮಾಡಿಲ್ಲ.

ಮೊದಲು ಇದೇ ಕುಟುಂದ ವೃದ್ಧರೊಬ್ಬರಿಗೆ ಕೊರೊನಾ ತಗುಲ್ಲಿತ್ತು, ಮನೆಯವರು ವೃದ್ಧನನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಈಗ ಕುಟುಂಬದ 4 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ನಿನ್ನೆ ಬೆಳಿಗ್ಗೆಯಿಂದಲೂ ಆರೊಗ್ಯ ಇಲಾಖೆಯ ಅಧಿಕಾರಿಗಳಿಗಾಗಿ ಕಾದು ಕುಳಿತರು ಏನು ಪ್ರಯೋಜನವಾಗಿಲ್ಲ. ಸದ್ಯ ಕುಟುಂಬದಲ್ಲಿ ಏಳು ಜನ ಇದ್ದು ಎಲ್ಲರಿಗೂ ಆರೋಗ್ಯದಲ್ಲಿ ಏರು ಪೇರಾಗಿದೆ. ಇದರಿಂದ ಹೆದರಿರುವ ಕುಟುಂಬಸ್ಥರು ಬೇಗ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಅಂತ ತಮ್ಮ ಅಳಲು ತೋಡಿಕೊಂಡಿದ್ದಾರೆ.

Published On - 11:42 am, Mon, 20 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us