AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: 8 ಮೂಟೆಯಷ್ಟು ಶುಂಠಿ ಕಟಾವು ಮಾಡಿ ಕಳ್ಳತನ

ಮೈಸೂರು: 8 ಮೂಟೆಯಷ್ಟು ಶುಂಠಿ ಕಟಾವು ಮಾಡಿ ಕಳ್ಳತನ

ರಾಮ್​, ಮೈಸೂರು
| Edited By: |

Updated on:Jul 30, 2023 | 10:41 AM

Share

ಜಮೀನಿನಲ್ಲಿ ಬೆಳದಿದ್ದ ಶುಂಠಿಯನ್ನು ಕಟಾವು ಮಾಡಿ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ನಡೆದಿದೆ.

ಮೈಸೂರು: ಟೊಮೇಟೊ (Tomato) ಮಾತ್ರವಲ್ಲದೇ ಶುಂಠಿ (Ginger) ಬೆಲೆ ಕೂಡ ಏರಿಕೆಯಾಗಿದೆ. ಈ ಹಿನ್ನೆಲೆ ಶುಂಠಿ ಕೊಂಡುಕೊಳ್ಳಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ. ಬೆಲೆ ಏರಿಕೆ ಹಿನ್ನೆಲೆ ಶುಂಠಿ ಕಳುವು ಮಾಡಲು ಜನರು ಮುಂದಾಗಿದ್ದಾರೆ. ಹೌದು ಜಿಲ್ಲೆಯ ಪಿರಿಯಾಪಟ್ಟಣ (Piryapattan) ತಾಲೂಕಿನ ಟಿಬೇಟಿಯನ್ ಕಾಲೋನಿಯ ಲಾಖಪಾ ಸೇರಿಂಗ್ ತಮ್ಮ ಜಮೀನಿನಲ್ಲಿ ಶುಂಠಿ ಬೆಳದಿದ್ದರು. ಕಳೆದ ರಾತ್ರಿ ತೋಟಕ್ಕೆ ನುಗ್ಗಿದ ಕಳ್ಳರು ಎಂಟು ಮೂಟೆಯಷ್ಟು ಫಸಲನ್ನು ಕಟಾವು ಮಾಡಿ ಮೂಟೆಯಲ್ಲಿ ತುಂಬಿಕೊಂಡು ಹೋಗಿದ್ದಾರೆ. ಶುಂಠಿ ಕಳೆದುಕೊಂಡು ಟಿಬೆಟಿಯನ್ ರೈತ ಕಂಗಾಲ ಆಗಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published on: Jul 30, 2023 10:39 AM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More