ಮಲ್ಪೆ ಬಳಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್ನಿಂದ 8 ಮೀನುಗಾರರ ರಕ್ಷಣೆ: ವಿಡಿಯೋ ನೋಡಿ
ಉಡುಪಿ ತಾಲೂಕಿನ ಕಡೆಕಾರಿನ ರಕ್ಷಾ ಅವರಿಗೆ ಸೇರಿದ ಮೀನುಗಾರಿಕಾ ಬೋಟ್ ಅರಬ್ಬೀ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಮುಳುಗಡೆಯಾಗಿದೆ.
ಉಡುಪಿ, ಡಿಸೆಂಬರ್ 22: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ (Malpe) ಶುಕ್ರವಾರ ಮೀನುಗಾರಿಕಾ ಬೋಟೊಂದು (Fishing Boat) ಮುಳುಗಡೆಯಾಗಿದೆ. ಬೋಟ್ನಿಂದ 8 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ತಾಲೂಕಿನ ಕಡೆಕಾರಿನ ರಕ್ಷಾ ಅವರಿಗೆ ಸೇರಿದ ಮೀನುಗಾರಿಕಾ ಬೋಟ್ ಅರಬ್ಬೀ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಮುಳುಗಡೆಯಾಗಿದೆ.
ಬೋಟ್ ತಳ ಭಾಗಕ್ಕೆ ವಸ್ತುವೊಂದು ತಗುಲಿ, ನೀರು ಒಳನುಗ್ಗಿದೆ. ಪರಿಣಮವಾಗಿ ಬೋಟ್ ಮುಳುಗಲು ಆರಂಭವಾಗಿದೆ. ವಯರ್ ಲೆಸ್ ಮೂಲಕ ರಕ್ಷಣೆ ಕರೆ ಬಂದ ಕಾರಣ, ಶ್ರೀ ಮೂಕಾಂಬಿಕಾ ಅನುಗ್ರಹ ಬೋಟ್ನವರು ತಕ್ಷಣ ಸ್ಥಳಕ್ಕೆ ಧಾವಿಸಿ ಮೀನುಗಾರರ ರಕ್ಷಣೆ ಮಾಡಿದ್ದಾರೆ. ಬೋಟ್ ಮುಳುಗಡೆಯಿಂದ ಸುಮಾರು 18 ಲಕ್ಷ ರೂಪಾಯಿ ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದೆ.
ಉಡುಪಿ ಜಿಲ್ಲೆಯ ಶಿರೂರು ಬಳಿ ಹವಾಮಾನ ವೈಪರೀತ್ಯದ ಪರಿಣಾಮ ದೋಣಿ ಮುಳುಗಿ ಇಬ್ಬರು ಮೀನುಗಾರರು ಸಮುದ್ರಪಾಲಾದ ಘಟನೆ ಡಿಸೆಂಬರ್ 18 ರಂದು ಸಂಭವಿಸಿತ್ತು. ಭಾನುವಾರ ರಾತ್ರಿ ಶಿರೂರಿನ ಕಳಿಹಿತ್ಲು ಕಡೆಯಿಂದ ಮೂವರು ಮೀನುಗಾರರು ಸಮುದ್ರಕ್ಕೆ ಇಳಿದಿದ್ದರು. ಸೋಮವಾರ ಬೆಳಗಿನ ಜಾವ 1:30ರ ಸುಮಾರಿಗೆ ದುರಂತ ಸಂಭವಿಸಿತ್ತು. ಹತ್ತಿರದಲ್ಲಿದ್ದ ದೋಣಿಯವರು ಒಬ್ಬ ವ್ಯಕ್ತಿಯನ್ನು ರಕ್ಷಿಸಿದರು. ಘಟನೆ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 22, 2023 11:25 AM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

