ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಕರ್ನಾಟಕದ ಕೊಪ್ಪಳ ತಾಲೂಕಿನ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರು ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಇಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ತೊಗಲುಗೊಂಬೆಯಾಟ ಎಂಬ ಗ್ರಾಮೀಣ ಹಾಗೂ ಪುರಾತನ ಕಲೆಯನ್ನು ವಿಶ್ವಕ್ಕೆ ಪರಿಚಯಿಸಿದ ಭೀಮವ್ವ ಇಂದು ದೇಶದ ಅತ್ಯುನ್ನತ ಗೌರವ ಪ್ರಶಸ್ತಿಗಳಲ್ಲೊಂದಾದ ಪದ್ಮ ಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ. ಭೀಮವ್ವ ತನ್ನ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲಕಸುಬಾಗಿ ಮಾಡಿಕೊಂಡು ಬಂದವರು. ಕೊಪ್ಪಳ ತಾಲೂಕಿನ ಕುಗ್ರಾಮ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಅನಕ್ಷರಸ್ಥೆಯಾದರೂ ವಂಶಪಾರಂಪರ್ಯವಾಗಿ ಬಂದ ತೊಗಲುಗೊಂಬೆಯಾಟ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ.
ಕರ್ನಾಟಕದ ಕೊಪ್ಪಳ ತಾಲೂಕಿನ 96 ವರ್ಷದ ಗೊಂಬೆಯಾಟ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರು ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಇಂದು ಪದ್ಮಶ್ರೀ (Padma Shri Award) ಪ್ರಶಸ್ತಿ ಸ್ವೀಕರಿಸಿದ್ದಾರೆ. ತೊಗಲುಗೊಂಬೆಯಾಟ ಎಂಬ ಗ್ರಾಮೀಣ ಹಾಗೂ ಪುರಾತನ ಕಲೆಯನ್ನು ವಿಶ್ವಕ್ಕೆ ಪರಿಚಯಿಸಿದ ಭೀಮವ್ವ ಇಂದು ದೇಶದ ಅತ್ಯುನ್ನತ ಗೌರವ ಪ್ರಶಸ್ತಿಗಳಲ್ಲೊಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ. ಭೀಮವ್ವ ತನ್ನ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲಕಸುಬಾಗಿ ಮಾಡಿಕೊಂಡು ಬಂದವರು. ಕೊಪ್ಪಳ ತಾಲೂಕಿನ ಕುಗ್ರಾಮ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಅನಕ್ಷರಸ್ಥೆಯಾದರೂ ವಂಶಪಾರಂಪರ್ಯವಾಗಿ ಬಂದ ತೊಗಲುಗೊಂಬೆಯಾಟ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ