ಮಂಗಳೂರು: ಮನೆಯೊಳಗೆ ಮಂಚದಡಿಯಲ್ಲಿತ್ತು ಬೃಹತ್ ಕಾಳಿಂಗ ಸರ್ಪ, ವಿಡಿಯೋ ನೋಡಿ

Edited By:

Updated on: May 28, 2024 | 12:54 PM

ದಕ್ಷಿಣ ಕನ್ನಡ ಜಿಲ್ಲೆಯ ಇಂದಬೆಟ್ಟುವಿನ ಬಂಗಾಡಿ ಎಂಬಲ್ಲಿ ಮನೆಯೊಂದರಲ್ಲಿ ಮಂಚದ ಕೆಳಗೆ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ಉರಗ ರಕ್ಷಕ ಅಶೋಕ್ ಲಾಯಿಲ ಎಂಬವರು ಅದನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King Cobra) ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಇಂದಬೆಟ್ಟುವಿನಲ್ಲಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಇಂದಬೆಟ್ಟುವಿನ ಬಂಗಾಡಿ (Bangadi) ಎಂಬಲ್ಲಿನ ಮನೆಯ ಮಂಚದ ಅಡಿಯಲ್ಲಿ ಕಾಳಿಂಗ ಸರ್ಪ ಇತ್ತು.

ಮನೆಮಂದಿ ಮನೆಯ ಒಂದು ಪಾರ್ಶ್ವವನ್ನು ಮಾತ್ರ ಬಳಸುತ್ತಿದ್ದರು. ಮತ್ತೊಂದು ಪಾರ್ಶ್ವದ ಕೋಣೆಯ ಮಂಚದ ಅಡಿಯಲ್ಲಿ ಕಾಳಿಂಗ ಸರ್ಪ ಇತ್ತು. ಕೋಣೆಯ ಬಾಗಿಲು ತೆಗೆದಾಗ ಮಂಚದಡಿಯಲ್ಲಿ ಶಬ್ದ ಕೇಳಿಬಂದಿದೆ. ಏನೆಂದು ಮಂಚದಡಿ ನೋಡಿದಾಗ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ನಂತರ ಮನೆಯವರು ಉರಗ ರಕ್ಷಕ ಅಶೋಕ್ ಲಾಯಿಲ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಉರಗ ರಕ್ಷಕ ಅಶೋಕ್ ಲಾಯಿಲ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಇದನ್ನೂ ಓದಿ: ಸೀರೆಯುಟ್ಟು ಕಬಡ್ಡಿ ಆಡಿದ ಮಹಿಳೆಯರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More