ಬಿದಿ ನಾಯಿ ಮೇಲೆ ಕಾರು ಚಲಾಯಿಸಿದ ಆದಿಕೇಶವಲು ಮೊಮ್ಮಗ; ನರಳಾಡಿ ಪ್ರಾಣ ಬಿಟ್ಟ ಶ್ವಾನ

Edited By:

Updated on: Feb 01, 2022 | 7:31 PM

ಇಂದು ಲಾರಾ ಶ್ವಾನದ ಅಂತ್ಯಕ್ರಿಯೆ ನಡೆಯಿತು. ಈ ಅಂತ್ಯಕ್ರಿಯೆಯಲ್ಲಿ ಸ್ಯಾಂಡಲ್​ವುಡ್​ನ ನಟಿ ರಮ್ಯಾ ಭಾಗಿಯಾಗಿ ಕಂಬನಿ ಮಿಡಿದಿದ್ದಾರೆ.

ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಮನಕಲುಕುವ ದೃಶ್ಯವೊಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಹೌದು, ಬೀದಿ ನಾಯಿ ಲಾರಾ ಮೇಲೆ ಆದಿಕೇಶವಲು ಮೊಮ್ಮಗ ಕಾರು ಹತ್ತಿಸಿದ್ದಾನೆ. ಘಟನೆ ಬಳಿಕ ಶ್ವಾನ ನಾಪತ್ತೆಯಾಗಿದ್ದು, ನಿನ್ನೆ ನಾಯಿಯ ಮೃತ ದೇಹ ಪತ್ತೆಯಾಗಿದೆ. ನರಳಾಡಿ ನರಳಾಡಿ ಕೊನೆಗೂ ಪ್ರಾಣ ಬಿಟ್ಟಿದ್ದು, ಹೆಬ್ಬಾಳ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಮೃತ ಶ್ವಾನ ಲಾರಾಳ ಪೋಸ್ಟ್ ಮಾಟಂ ಮಾಡಲಾಗಿದೆ. ಆಂಬುಲೆನ್ಸ್ ಮೂಲಕ ಸುಮ್ಮನಹಳ್ಳಿ ಚಿತಾಗಾರಕ್ಕೆ ಶ್ವಾನ ಲಾರಾ ಮೃತದೇಹವನ್ನು ತರಲಾಗಿದ್ದು, ಬಿಬಿಎಂಪಿ ಪ್ರಾಣಿಗಳ ಚಿತಾಗಾರದಲ್ಲಿ ಲಾರಾ ಅಂತ್ಯಕ್ರಿಯೆ ಮಾಡಲಾಯಿತು. ಅಂತ್ಯಕ್ರಿಯೆಯಲ್ಲಿ ಸ್ಯಾಂಡಲ್​ವುಡ್​ನ ನಟಿ ರಮ್ಯಾ ಭಾಗಿಯಾಗಿ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ:

ಯಶ್​ ಟೆಂಪಲ್​ ರನ್​; ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ‘ಕೆಜಿಎಫ್ 2’​ ತಂಡ

Follow Us