ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು

Edited By: ಕಿರಣ್ ಹನುಮಂತ್​ ಮಾದಾರ್

Updated on: Jun 27, 2024 | 4:53 PM

ಹಾವುಗಳು ಸ್ವಲ್ಪ ಜಾಗ ಸಿಕ್ಕರೆ ಸಾಕು ಎಲ್ಲೆಂದರಲ್ಲಿ ಸೇರಿಕೊಂಡು ಬಿಡುತ್ತದೆ. ಇದೀಗ ಮಂಗಳೂರು ನಗರಕ್ಕೆ ಎಂಟ್ರಿ ಕೊಟ್ಟ ಹೆಬ್ಬಾವು ಮರಿಯೊಂದು ನಗರದ ಕೊಡಿಯಾಲ್ ಬೈಲ್ ಬಳಿ ಇರುವ ಯೂನಿಯನ್ ಬ್ಯಾಂಕ್​ನ ಎಸಿ ಯೊಳಗಡೆ ಸೇರಿಕೊಂಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಗಂಗೇಶ್ ಬೋಳಾರ್ ಅವರು, ಎಸಿ ಪ್ಯಾನಲ್‌ ಒಳಗಿದ್ದ ಹೆಬ್ಬಾವು ಮರಿಯನ್ನ ಹೊರಗೆ ತೆಗೆದು ರಕ್ಷಿಸಿದ್ದಾರೆ.

ದಕ್ಷಿಣ ಕನ್ನಡ, ಜೂ.27: ಮಳೆ ಹಿನ್ನಲೆ ಮಂಗಳೂರು ನಗರದ ಕೊಡಿಯಾಲ್ ಬೈಲ್ ಬಳಿ ಇರುವ ಯೂನಿಯನ್ ಬ್ಯಾಂಕ್​ನ ಎಸಿ ಯೊಳಗಡೆ ಹೆಬ್ಬಾವು ಮರಿ(baby python) ಸೇರಿಕೊಂಡ ಘಟನೆ ಬೆಳಕಿಗೆ ಬಂದಿದೆ. ಇನ್ನು ಹೆಬ್ಬಾವಿನ ಮರಿಯನ್ನ ನೋಡುತ್ತಿದ್ದಂತೆ ಕಂಗಾಲಾದ ಬ್ಯಾಂಕ್​ ಸಿಬ್ಬಂದಿ, ಸ್ಥಳೀಯ ಉರಗ ತಜ್ಞ ಗಂಗೇಶ್ ಬೋಳಾರ್ ಅವರಿಗೆ ಕರೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅವರು, ಎಸಿ ಪ್ಯಾನಲ್‌ ಒಳಗಿದ್ದ ಹೆಬ್ಬಾವು ಮರಿಯನ್ನ ಹೊರಗೆ ತೆಗೆದು ರಕ್ಷಿಸಿದ್ದಾರೆ. ಬಳಿಕ  ಬ್ಯಾಂಕ್​ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಈ ಹೆಬ್ಬಾವು‌ ಮರಿ ಎಸಿ ಔಟ್ ಡೋರ್​​ನ ಕೇಬಲ್ ಮೂಲಕ ಒಳ ಬಂದಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಉರಗ ತಜ್ಞ ಗಂಗೇಶ್ ಹೇಳುವಂತೆ ಇದಕ್ಕೆ 180 ಹಲ್ಲುಗಳಿದ್ದು, ಇದು ಕಚ್ಚುತ್ತದೆ. ಆದರೆ, ಇದರಲ್ಲಿ ಯಾವುದೇ ವಿಷ ಇರುವುದಿಲ್ಲವಂತೆ. ಒಟ್ಟಿನಲ್ಲಿ ಮಂಗಳೂರಿನ ಬ್ಯಾಂಕ್​ಗೆ ಎಂಟ್ರಿ ಕೊಟ್ಟಿದ್ದ ಮರಿ ಹೆಬ್ಬಾವನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More