AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ

ಸುರೇಶ ನಾಯಕ
| Edited By: |

Updated on: May 22, 2026 | 3:02 PM

Share

ಜಪಾನ್ ಮೂಲದ ಮಿಯಾಜಾಕಿ ಮಾವಿನಹಣ್ಣು ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣಿನ ತಳಿಗಳಲ್ಲಿ ಒಂದಾಗಿದೆ. ಇದರ ಬೆಲೆ ಪ್ರತಿ ಕೆಜಿಗೆ 2.5 ಲಕ್ಷ ರೂಪಾಯಿಗಳವರೆಗೆ ತಲುಪುತ್ತದೆ. ಇಂತಹ ದುಬಾರಿ ದರದ ಮಾವು ತಳಿಯನ್ನು ಬೀದರ್ ನ ರೈತ ಬೆಳೆದು ಗಮನಸೆಳೆದಿದ್ದಾರೆ. ಹೌದು...ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲ್ಬರ್ಗಾ ಗ್ರಾಮದ ರೈತ ಹಣಮಂತರಾವ್ ಶ್ರೀಮಾಳೆ ಅವರು ವಿಶ್ವದ ದುಬಾರಿ ಬೆಲೆಯ ಮಾವನ್ನ ಬೀದರ್ ನ ರೈತ ಬೆಳೆಸಿ ಸೈ ಎಣಿಸಿಕೊಂಡಿದ್ದಾರೆ. ವಿದೇಶಿ ತಳಿ ನಮ್ಮ ನೆಲದಲ್ಲಿ ಬೆಳೆಯುತ್ತಾ ಎಂದು ಹಣಮಂತರಾವ್ ಶ್ರೀಮಾಳೆ ಅವರಯ ತೋಟದಲ್ಲಿ ಪ್ರಾಯೋಗಿಕವಾಗಿ ಮಿಯಾಜಾಕಿ ಮಾವು ಬೆಳೆದಿದ್ದು, ಅದು ಇದೀಗ ಉತ್ತಮ ಫಲ ಕೊಟ್ಟಿದೆ.

ಬೀದರ್, (ಮೇ 22): ಜಪಾನ್ ಮೂಲದ ಮಿಯಾಜಾಕಿ ಮಾವಿನಹಣ್ಣು (Miyazaki Mango) ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣಿನ ತಳಿಗಳಲ್ಲಿ ಒಂದಾಗಿದೆ. ಇದರ ಬೆಲೆ ಪ್ರತಿ ಕೆಜಿಗೆ 2.5 ಲಕ್ಷ ರೂಪಾಯಿಗಳವರೆಗೆ ತಲುಪುತ್ತದೆ. ಇಂತಹ ದುಬಾರಿ ದರದ ಮಾವು ತಳಿಯನ್ನು ಬೀದರ್ ನ (Bidar) ರೈತ ಬೆಳೆದು ಗಮನಸೆಳೆದಿದ್ದಾರೆ. ಹೌದು…ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲ್ಬರ್ಗಾ ಗ್ರಾಮದ ರೈತ ಹಣಮಂತರಾವ್ ಶ್ರೀಮಾಳೆ ಅವರು ವಿಶ್ವದ ದುಬಾರಿ ಬೆಲೆಯ ಮಾವನ್ನ ಬೀದರ್ ನ ರೈತ ಬೆಳೆಸಿ ಸೈ ಎಣಿಸಿಕೊಂಡಿದ್ದಾರೆ. ವಿದೇಶಿ ತಳಿ ನಮ್ಮ ನೆಲದಲ್ಲಿ ಬೆಳೆಯುತ್ತಾ ಎಂದು ಹಣಮಂತರಾವ್ ಶ್ರೀಮಾಳೆ ಅವರಯ ತೋಟದಲ್ಲಿ ಪ್ರಾಯೋಗಿಕವಾಗಿ ಮಿಯಾಜಾಕಿ ಮಾವು ಬೆಳೆದಿದ್ದು, ಅದು ಇದೀಗ ಉತ್ತಮ ಫಲ ಕೊಟ್ಟಿದೆ.

ಈ ಯಶಸ್ಸಿನಿಂದ ಪ್ರೇರಿತರಾಗಿ ಮುಂದಿನ ದಿನಗಳಲ್ಲಿ ಎರಡು ಎಕರೆ ಪ್ರದೇಶದಲ್ಲಿ ಮಿಯಾಜಾಕಿ ಮಾವು ಬೆಳೆಸಲು ರೈತ ನಿರ್ಧರಿಸಿದ್ದಾರೆ. ಜಪಾನ್ ದೇಶದಲ್ಲಿ ಹೆಚ್ಚಾಗಿ ಬೆಳೆಯುವ ಈ ಮಿಯಾಜಾಕಿ ಮಾವು ತನ್ನ ವಿಶಿಷ್ಟ ರುಚಿ ಮತ್ತು ಗುಣಮಟ್ಟದಿಂದ ವಿಶ್ವದ ಗಮನ ಸೆಳೆದಿದೆ. ಈ ಹಣ್ಣು ಅತ್ಯಂತ ಸಿಹಿಯಾಗಿದ್ದು, ದೇಹಕ್ಕೆ ಅಗತ್ಯವಾದ ಆಂಟಿ ಆಕ್ಸಿಡೆಂಟ್‌ಗಳು, ಬೀಟಾ ಕ್ಯಾರೋಟಿನ್ ಹಾಗೂ ಫೋಲಿಕ್ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿರುವುದಾಗಿ ಹೇಳಲಾಗುತ್ತಿದೆ. ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ಸಹಾಯಕವಾಗುತ್ತದೆ ಎನ್ನಲಾಗುತ್ತಿದೆ. ಹೀಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಹಣ್ಣಿಗೆ ಭಾರೀ ಬೇಡಿಕೆ ಇದ್ದು, ಕೆಲವೆಡೆ ಕೆಜಿಗೆ ಲಕ್ಷಾಂತರ ರೂಪಾಯಿ ಬೆಲೆ ಸಿಗುತ್ತಿದೆ. ಸಾಂಪ್ರದಾಯಿಕ ಬೆಳೆಗಳ ಜೊತೆಗೆ ಹೊಸ ತಳಿಗಳ ಬೆಳೆಗಳತ್ತ ರೈತರು ಆಸಕ್ತಿ ತೋರುತ್ತಿರುವುದು ಕೃಷಿಯಲ್ಲಿ ಹೊಸ ಆಶಾಭರವನ್ನ ಮೂಡಿಸಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸುರೇಶ್ ನಾಯಕ ಕೊಟ್ಟಿರುವ ಪ್ರತ್ಯೇಕ್ಷ ವರದಿ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More