ಕೊಲೆ ಪ್ರಕರಣದ ಆರೋಪಿ ದರ್ಶನ್ ಶಿಫ್ಟ್ ಆಗಲಿರುವ ಖ್ಯಾತ ಬಳ್ಳಾರಿ ಸೆಂಟ್ರಲ್ ಜೈಲಿನ ಕಿರು ಪರಿಚಯ

ಅರುಣ್​ ಕುಮಾರ್​ ಬೆಳ್ಳಿ

Updated on: Aug 28, 2024 | 10:55 AM

ಜಾಸ್ತಿ ಕಿಚಾಯಿಸಿದರೆ ಬಳ್ಳಾರಿ ಜೈಲಿಗೆ ಹಾಕ್ತೀನಿ ಅಂತ ಪೊಲೀಸರು ಅಪರಾಧಿಗಳನ್ನು ಹೆದರಿಸುವಷ್ಟು ಖ್ಯಾತಿ ಬಳ್ಳಾರಿ ಜೈಲಿನದ್ದು. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಈ ಜೈಲಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಇರಿಸಲಾಗುತ್ತಿತ್ತು. ನಂತರದ ದಿನಗಳಲ್ಲಿ ಕುಖ್ಯಾತ ರೌಡಿಗಳನ್ನು ಇಲ್ಲಿಗೆ ಶಿಫ್ಟ್ ಮಾಡುವ ಪರಿಪಾಠ ಶುರುವಾಯಿತು.

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಿತ್ರನಟ ದರ್ಶನ್ ರನ್ನು ಬರಮಾಡಿಕೊಳ್ಳಲು ಖ್ಯಾತ ಬಳ್ಳಾರಿ ಸೆಂಟ್ರಲ್ ಜೈಲು ತಯಾರಾಗಿದೆ. ಮಾಡಿದ್ದುಣ್ಣೋ ಮಾರಾಯ ಅಂತಾರಲ್ಲ ಅನ್ನುವ ಹಾಗೆ ಬೆಂಗಳೂರಿನ ಕೇಂದ್ರೀಯ ಕಾರಾಗೃಹದಲ್ಲಿ ಮಾಡಿದ್ದಕ್ಕಿಂತ ಜಾಸ್ತಿಯೇ ಉಣತೊಡಗಿದ್ದ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಬಳ್ಳಾರಿ ಜೈಲಿನ ಬಗ್ಗೆ ನಮ್ಮ ವರದಿಗಾರನ ಮಾಹಿತಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ಗೆ ಆತಿಥ್ಯ ಕೊಡಲು ರೌಡಿಗಳ ಮಧ್ಯೆ ಸ್ಪರ್ಧೆ; ಕಂಟಕ ಎದುರಾಗಿದ್ದು ಮಾತ್ರ ದಾಸನಿಗೆ  

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.