ಕಂಡ ಕಂಡವರ ಮೇಲೆ ದಾಳಿ ಮಾಡ್ತಿರುವ ಗೂಳಿ; ಆತಂಕದಲ್ಲೇ ಓಡಾಡ್ತಿರೋ ಸಾರ್ವಜನಿಕರು

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 03, 2023 | 3:38 PM

ಗದಗದ ಬೆಟಗೇರಿಯಲ್ಲಿ ಗೂಳಿಯೊಂದು ಏಕಾಏಕಿ ಬಂದು ಗುದ್ದಿ ಗಾಯಗೊಳಿಸುತ್ತಿದೆ. ಗೂಳಿಯ ಹಾವಳಿಗೆ ಬೆಚ್ಚಿ ಬಿದ್ದ ಸಾರ್ವಜನಿಕರು ಆತಂಕದಲ್ಲೇ ಓಡಾಡುವಂತಾಗಿದೆ. ಗೂಳಿಯ ಡೆಡ್ಲಿ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗದಗ, ಡಿ.03: ಕಂಡ ಕಂಡವರ ಮೇಲೆ ಗೂಳಿಯೊಂದು ದಾಳಿ(Bull Attack) ಮಾಡುತ್ತಿರುವ ಘಟನೆ ಗದಗದ ಬೆಟಗೇರಿಯಲ್ಲಿ ನಡೆದಿದೆ. ಈ ಗೂಳಿ ಏಕಾಏಕಿ ಬಂದು ಗುದ್ದಿ ಗಾಯಗೊಳಿಸುತ್ತಿದೆ. ಗೂಳಿಯ ಹಾವಳಿಗೆ ಬೆಚ್ಚಿ ಬಿದ್ದ ಸಾರ್ವಜನಿಕರು ಆತಂಕದಲ್ಲೇ ಓಡಾಡುವಂತಾಗಿದೆ. ಗೂಳಿಯ ಡೆಡ್ಲಿ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಅಟ್ಯಾಕ್ ಮಾಡಿದೆ. ಕಳೆದ 15 ದಿನಗಳಲ್ಲಿ 8 ಜನರ ಮೇಲೆ ದಾಳಿ ಮಾಡಿದ್ದು, ಗೂಳಿಯ ದಾಳಿ ನಿಯಂತ್ರಣ ಮಾಡದ ನಗರಸಭೆ ವಿರುಧ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

 

 

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More