ಚಾರ್ಮಾಡಿ ಘಾಟ್ನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು! ನಾಲ್ವರು ಬದುಕಿದ್ದೇ ಪವಾಡ
ಕೂಡಲೆ ನಾಲ್ವರು ಕಾರಿನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ಮುಂಜಾನೆ 3 ಗಂಟೆ ಸಮಯದಲ್ಲಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ನಲ್ಲಿ (Charmadi Ghat) ಮಳೆ ಮಧ್ಯೆಯೂ ಕಾರೊಂದು (Car) ಧಗಧಗನೆ ಹೊತ್ತಿ ಉರಿದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ. ಒಂದೇ ಕುಟುಂಬದ ನಾಲ್ವರು ಮಂಗಳೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಚಾರ್ಮಾಡಿ ಘಾಟ್ನಲ್ಲಿ ಹೋಗುವ ವೇಳೆ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ನಾಲ್ವರು ಕಾರಿನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ಮುಂಜಾನೆ 3 ಗಂಟೆ ಸಮಯದಲ್ಲಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ‘ಹೆಣ್ಣು ಮಗು ಬೇಕು’: ಮನದ ಆಸೆ ತಿಳಿಸಿ, ಮಕ್ಕಳನ್ನು ನೋಡಿಕೊಳ್ಳುವುದು ಕಲಿಯುತ್ತಿರುವ ರಣಬೀರ್ ಕಪೂರ್
Follow Us
Latest Videos
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ

