ಮರೆತು ಹೋಗಿದ್ದ 30 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಇದ್ದ ಬ್ಯಾಗ್ ವಾಪಸ್ ನೀಡಿದ ಕಂಡಕ್ಟರ್

Edited By:

Updated on: Oct 27, 2024 | 12:05 PM

ಮಹಿಳೆಯೊಬ್ಬರು ಬಸ್​ನಲ್ಲೇ ಚಿನ್ನಾಭರಣ ಇದ್ದ ಬ್ಯಾಗ್ ಮರೆತುಹೋಗಿದ್ದು, ಇದನ್ನು ಗಮನಿಸಿದ ಲೇಡಿ ಕಂಡಕ್ಟರ್​ ಮಹಿಳೆಗೆ ವಾಪಸ್ ಬ್ಯಾಗ್ ನೀಡಿದ್ದಾರೆ. ಬ್ಯಾಗ್ ಮರೆತುಹೋಗಿದ್ದ ಮಹಿಳೆಯನ್ನು ಪತ್ತೆ ಮಾಡಿದ್ದೇ ರೋಚಕ

ಗದಗ, (ಅಕ್ಟೋಬರ್ 27): ವ್ಯಕ್ತಿಯೊಬ್ಬರ ಜೇಬಿನಿಂದ ಹತ್ತು ರೂಪಾಯಿ ಆಚೆ ಬಿದ್ದರು ಎತ್ತಿಕೊಂಡು ಹೋಗುವ ಈಗಿನಲ ಕಾಲದಲ್ಲಿ ಬಸ್ ನಲ್ಲೇ ಬಿಟ್ಟು ಹೋಗಿದ್ದ ಚಿನ್ನಾಭರಣ ಇದ್ದ ಬ್ಯಾಗ್​ ಅನ್ನು ನಿರ್ವಾಹಕಿ ವಾಪಸ್ ನೀಡಿದ್ದಾರೆ. ಗದಗ ತಾಲೂಕಿನ ಮುಳಗುಂದ ಪಟ್ಟಣದ ಶಕಿಲಾಬಾನು ಎಂಬ ಮಹಿಳೆ, ಮೂವತ್ತು ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ ಆಭರಣ ಮತ್ತು 2160 ರೂ. ಇದ್ದ ಬ್ಯಾಗ್ ಅನ್ನು ಬಸ್​ನಲ್ಲೇ ಬಿಟ್ಟು ಹೋಗಿದ್ದರು. ಬಳಿಕ ಬಸ್​ ನಿರ್ವಾಹಕಿ ಅನಸೂಯಾ ಅವರು ಬ್ಯಾಗ್ ಗಮನಿಸಿ ತಮ್ಮ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ನಂತರ ಬೆಟಗೇರಿ ಬಡಾವಣೆ ಪೊಲೀಸರು ಮಾಹಿತಿ ನೀಡಿ. ಬ್ಯಾಗ್ ನಲ್ಲಿದ್ದ ಪ್ಯಾನ್ ಕಾರ್ಡ್ ಮೂಲಕ ಮಹಿಳೆಯನ್ನು ಪತ್ತೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡು ಬ್ಯಾಗ್​ ಹಸ್ತಾಂತರಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ಮಹಿಳೆಗೆ ಆಭರಣ ಹಾಗೂ ಹಣ ಮರಳಿಸಿದ್ದು, ನಿರ್ವಾಹಕಿಯ ಪ್ರಮಾಣಿಕ ಕರ್ತವ್ಯಕ್ಕೆ ಸಾರ್ವಜನಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More