ದೆಹಲಿ: ಹಿಜಾಬ್ ನಿಷೇಧ ಹಿಂಪಡೆಯುವ ಸಿದ್ದರಾಮಯ್ಯ ಸರ್ಕಾರದ (Siddaramaiah government) ನಿರ್ಧಾರವನ್ನು ಬಿಜೆಪಿ ನಾಯಕರು ಉಗ್ರವಾಗಿ ಟೀಕಿಸುತ್ತಿದ್ದಾರೆ. ದೆಹಲಿಯಲ್ಲಿ ಇಂದು ಬೆಳಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸರ್ಕಾರದ ನಿರ್ಧಾರ ಬೇಜವಾಬ್ದಾರಿ (irresponsible) ಮತ್ತು ಹತಾಶೆಯ (desperate) ಪ್ರತೀಕವಾಗಿದೆ ಎಂದು ಹೇಳಿದರು. ಹಿಂದೆ 2018 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗಲಾರದು ಅಂತ ಖಾತ್ರಿಯಾದಾಗ, ಸಿದ್ದರಾಮಯ್ಯ ಲಿಂಗಾಯತ ಧರ್ಮವನ್ನು ಒಡೆಯುವ ಪ್ರಯತ್ನ ಮಾಡಿದ್ದರು ಮತ್ತು ಅದರ ಪರಿಣಾಮ ಅನುಭವಿಸಿದರು. ರಾಜ್ಯದ ಜನ ಭೀಕರ ಬರಗಾಲದಿಂದ ತತ್ತರಿಸಿದ್ದರೂ ಅವರ ಸಂಕಷ್ಟಗಳಿಗೆ ನೆರವಾಗುವ ಬದಲು ಧರ್ಮದ ರಾಜಕೀಯ ಶುರುಮಾಡಿ ಕಾಂಗ್ರೆಸ್ ಪಕ್ಷದ ಒಡೆದಾಳುವ ನೀತಿಯನ್ನು ಜಾರಿಗೆ ತರುತ್ತಿದ್ದಾರೆ. ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷವನ್ನು ಹತಾಶಗೊಳಿಸಿದೆ. 20-25 ಸ್ಥಾನ ಗೆಲ್ತೀವಿ ಅಂತ ಹೇಳುತ್ತಿದ್ದವರು ಮೋದಿ ಗ್ಯಾರಂಟಿ ಮಾಡಿರುವ ಚಮಾತ್ಕಾರದಿಂದ ಗಾಬರಿಗೊಳಗಾಗಿ ತಮ್ಮ ಎಂದಿನ ಒಡೆದಾಳುವ ನೀತಿಗೆ ವಾಪಸ್ಸಾಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ