Video: ವಾರಾಣಸಿಗೆ ಬಂದಿಳಿದ ಮಾರಿಷಸ್ ಪ್ರಧಾನಿಯನ್ನು ಭೇಟಿಯಾದ ಪ್ರಧಾನಿ ಮೋದಿ

Updated on: Sep 11, 2025 | 12:07 PM

ಮಾರಿಷಸ್ ಪ್ರಧಾನಿ ಡಾ. ನವೀನಚಂದ್ರ ರಾಮಗೂಲಂ ಇಂದು ವಾರಾಣಸಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.ವಿಮಾನ ನಿಲ್ದಾಣ ಮತ್ತು ಹೋಟೆಲ್ ನಡುವೆ ಆರು ಸ್ಥಳಗಳಲ್ಲಿ ವಿದ್ಯಾರ್ಥಿಗಳು ಮಾರಿಷಸ್ ಧ್ವಜ ಮತ್ತು ಭಾರತದ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿದ್ದರು. ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ನಗರಾಭಿವೃದ್ಧಿ ಸಚಿವ ಸುರೇಶ್ ಖನ್ನಾ ಅವರು ಮಾರಿಷಸ್ ಪ್ರಧಾನಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ವಾರಾಣಸಿ, ಸೆಪ್ಟೆಂಬರ್ 11: ಮಾರಿಷಸ್ ಪ್ರಧಾನಿ ಡಾ. ನವೀನಚಂದ್ರ ರಾಮಗೂಲಂ ಇಂದು ವಾರಾಣಸಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.ವಿಮಾನ ನಿಲ್ದಾಣ ಮತ್ತು ಹೋಟೆಲ್ ನಡುವೆ ಆರು ಸ್ಥಳಗಳಲ್ಲಿ ವಿದ್ಯಾರ್ಥಿಗಳು ಮಾರಿಷಸ್ ಧ್ವಜ ಮತ್ತು ಭಾರತದ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿದ್ದರು.

ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ನಗರಾಭಿವೃದ್ಧಿ ಸಚಿವ ಸುರೇಶ್ ಖನ್ನಾ ಅವರು ಮಾರಿಷಸ್ ಪ್ರಧಾನಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಅಭಿವೃದ್ಧಿ ಪಾಲುದಾರಿಕೆ ಮತ್ತು ಸಾಮರ್ಥ್ಯ ವೃದ್ಧಿಯ ಮೇಲೆ ನಿರ್ದಿಷ್ಟವಾಗಿ ಗಮನಹರಿಸುವ ಮೂಲಕ ದ್ವಿಪಕ್ಷೀಯ ಸಹಕಾರದ ನಿರ್ಣಾಯಕ ವಿಷಯಗಳ ಕುರಿತು ಮೋದಿ ಮತ್ತು ರಾಮಗೂಲಂ ಚರ್ಚೆ ನಡೆಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಉತ್ತರಾಖಂಡದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ರೋಡ್ ಶೋ ನಡೆಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More