ಗದಗ: ಮೈಕ್ರೋ ಫೈನಾನ್ಸ್ ಸಂಸ್ಥೆಯೊಂದರ ಕಿರುಕುಳಕ್ಕೆ ಬೇಸತ್ತು ಮಕ್ಕಳ ಶಾಲೆ ಬಿಡಿಸಿ ಊರನ್ನೇ ತ್ಯಜಿಸಿದ ಕುಟುಂಬ

ಅರುಣ್​ ಕುಮಾರ್​ ಬೆಳ್ಳಿ

Updated on: Feb 07, 2025 | 10:49 AM

ರಿಹಾನಾಳ ಪತಿ ರಫೀಕ್ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಕುಟುಂಬದ ನಿರ್ವಹಣೆಯೆಲ್ಲ ಅಕೆಯೊಬ್ಬಳ ಮೇಲೆ ಬಿದ್ದಿದೆ. ಏಳನೇ ತರಗತಿಯಲ್ಲಿ ಓದುತ್ತಿದ್ದ ಮಗಳು ಮತ್ತು 5ನೇ ತರಗತಿಯಲ್ಲಿದ್ದ ಮಗನನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕರೆದೊಯ್ಯುತ್ತಿದ್ದಾರಂತೆ. ಚಿಕ್ಕಮಕ್ಕಳು ಎಷ್ಟು ಕೆಲಸ ಮಾಡಿಯಾವು? ಫೈನಾನ್ಸ್ ಸಂಸ್ಥೆಯು ಇವರ ಮನೆಯನ್ನು ಜಪ್ತಿ ಮಾಡಿಕೊಂಡು ಹೋಗಿದೆ.

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಖಾನಾಪುರದ ನಿವಾಸಿ ರಿಹಾನಾ ದೊಡ್ಮನಿಯ ಕಣ್ಣೀರ ಕಥೆಯಿದು. ಮೈಕ್ರೋ ಫೈನಾನ್ಸ್ ಸಂಸ್ಥಯೊಂದು ನೀಡಿದ ಕಿರುಕುಳದಿಂದ ಬೇಸತ್ತು, ರೋಸಿ ಈಕೆ ತನ್ನ ಮಕ್ಕಳ ಶಾಲೆ ಬಿಡಿಸಿ ಗಂಡ ರಫೀಕ್ ದೊಡ್ಮನಿಯೊಂದಿಗೆ ಬೇರೊಂದು ಊರಿಗೆ ಬಂದು ಕೂಲಿನಾಲಿ ಮಾಡಿ ಬದುಕುತ್ತಿದ್ದಾರೆ. ಗದಗಿನ ಎಎಮ್​ಒಎಮ್ ಹೆಸರಿನ ಮೈಕ್ರೋ ಫೈನಾನ್ಸ್ ಸಂಸ್ಥೆಯಲ್ಲಿ ₹3 ಲಕ್ಷ ಸಾಲ ಮಾಡಿದ್ದ ಈಕೆ ತಿಂಗಳಿಗೆ ₹ 7250 ರಂತೆ ₹ 1.30 ಲಕ್ಷ ಸಾಲವನ್ನು ತೀರಿಸಿದ್ದಾರೆ. ಅದರೆ ಸಂಸ್ಥೆಯ ಖದೀಮರು ಅದರಲ್ಲಿ ₹90,000 ಬಡ್ಡಿಗೆ ಹೋಗಿದೆ, ಸಾಲದ ಮೊತ್ತಕ್ಕೆ ಕೇವಲ ₹40,000 ಮಾತ್ರ ಜಮಾ ಆಗಿದೆ ಅಂತ ಹೇಳಿದ್ದಾರೆ. ಸಜ್ಜನ ರಾಜಕಾರಣಿಯೆಂದು ಹೆಸರಾಗಿರುವ ಹೆಚ್ ಕೆ ಪಾಟೀಲ್ ಅವರ ಜಿಲ್ಲೆಯಲ್ಲಿ ಹೀಗೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಮತೆಗೆದುಕೊಳ್ಳಲು ಸರ್ಕಾರ ಯಾಕೆ ಮೀನಮೇಷ ಎಣಿಸುತ್ತಿದೆ?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.