ತಮಿಳುನಾಡುಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆ, ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಶಪಿಸಿದ ರೈತ ಮಹಿಳೆ!

Updated on: Aug 21, 2023 | 3:30 PM

ಮುಖ್ಯಮಂತ್ರಿಯವರನ್ನು ವಿಶೇಷವಾಗಿ ತರಾಟೆಗೆ ತೆಗೆದುಕೊಂಡ ಮಹಿಳೆ ಗೌರಮ್ಮ, ಬಸ್ ಫ್ರೀ, ವಿದ್ಯುತ್ ಫ್ರೀ ಅದು ಫ್ರೀ ಇದು ಫ್ರೀ ಅಂತ ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ? ನಮ್ಮ ಮಕ್ಕಳು ಉಪವಾಸ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಯಾಕೆ ಪೆಟ್ರೋಲ್ ಬೆಲೆ ಕಡಿಮೆ ಮಾಡಲಿಲ್ಲ? ಯಾಕೆ ಡೀಸೆಲ್ ಬೆಲೆ ಕಡಿಮೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಮಂಡ್ಯ: ನಗರದ ಸಂಜಯ ಸರ್ಕಲ್ ನಲ್ಲಿ ಕಾವೇರಿ ನದಿ ನೀರನ್ನು (Cauvery River water) ತಮಿಳುನಾಡುಗೆ ಹರಿಸುತ್ತಿರುವುದನ್ನು ವಿರೋಧಿಸಿ ರೈತರ ಪ್ರತಿಭಟನೆ (farmers protest) ಜೋರಾಗುತ್ತಿದೆ. ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಿಂದ ರೈತರು ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜಿಲ್ಲೆಯ ಗ್ರಾಮವೊಂದರಿಂದ ಅಗಮಿಸಿ ಧರಣಿಯಲ್ಲಿ ಪಾಲ್ಗೊಂಡಿರುವ ಹಿರಿಯ ರೈತ ಮಹಿಳೆಯೊಬ್ಬರು (farmer woman) ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಯವರನ್ನು ವಿಶೇಷವಾಗಿ ತರಾಟೆಗೆ ತೆಗೆದುಕೊಂಡ ಮಹಿಳೆ (ಅವರ ಹೆಸರು ಗೌರಮ್ಮ), ಬಸ್ ಫ್ರೀ, ವಿದ್ಯುತ್ ಫ್ರೀ ಅದು ಫ್ರೀ ಇದು ಫ್ರೀ ಅಂತ ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ? ನಮ್ಮ ಮಕ್ಕಳು ಉಪವಾಸ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಯಾಕೆ ಪೆಟ್ರೋಲ್ ಬೆಲೆ ಕಡಿಮೆ ಮಾಡಲಿಲ್ಲ? ಯಾಕೆ ಡೀಸೆಲ್ ಬೆಲೆ ಕಡಿಮೆ ಮಾಡಲಿಲ್ಲ, ಯಾಕೆ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ ಅಂತೆಲ್ಲ ಪ್ರಶ್ನೆಗಳ ಸುರಿಮಳೆಗೈದರು. ಗೌರಮ್ಮ ಸರ್ಕಾರಕ್ಕೆ ದುರ್ದಾನ ಹಾಕುವಾಗ ರವಿ ಹೆಸರನ್ನು ಉಲ್ಲೇಖಿಸುತ್ತಾರೆ, ಅದು ಯಾರು ಅಂತ ಗೊತ್ತಾಗಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More