ವಿಧಾನ ಪರಿಷತ್ ಚುನಾವಣೆ: ದೆಹಲಿಯಲ್ಲಿ ಚರ್ಚೆಗೆ ಬಂದ ಕಾಂಗ್ರೆಸ್ ಮುಖಂಡರ ಹೆಸರುಗಳು ಹೀಗಿವೆ

ದಲಿತ ಸಮುದಾಯದ ಅಭ್ಯರ್ಥಿಯ ಹೆಸರನ್ನು ತಾವೇ ಸೂಚಿಸುವುದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಂತೆ. ಮುಸ್ಲಿಂ ಸಮುದಾಯದಿಂದ ಇಸ್ಮಾಯಿಲ್ ತಮಟಗಾರ್ ಮತ್ತು ಸೌದಾಗರ್ ಎನ್ನುವ ಕಾಂಗ್ರೆಸ್ ಮುಖಂಡರ ಹೆಸರುಗಳನ್ನು ಮತುಕತೆ ನಡೆಯುವಾಗ ಪ್ರಸ್ತಾಪಿಸಲಾಗಿದೆ.

ವಿಧಾನ ಪರಿಷತ್ ಚುನಾವಣೆ: ದೆಹಲಿಯಲ್ಲಿ ಚರ್ಚೆಗೆ ಬಂದ ಕಾಂಗ್ರೆಸ್ ಮುಖಂಡರ ಹೆಸರುಗಳು ಹೀಗಿವೆ
|

Updated on: May 30, 2024 | 5:04 PM

ದೆಹಲಿ: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲು ರಾಜ್ಯ ಕಾಂಗ್ರೆಸ್ ಭಾರಿ ಕಸರತ್ತು ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಿನ್ನೆ ಮತ್ತು ಇವತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರಂದೀಪ್ ಸುರ್ಜೆವಾಲಾ ಮತ್ತು ಕೆಸಿ ವೇಣುಗೋಪಾಲ್ ಜೊತೆ ದೀರ್ಘ ಸಮಾಲೋಚನೆ ನಡೆಸಿದ್ದಾರೆ. ನಮ್ಮ ದೆಹಲಿ ವರದಿಗಾರ ನೀಡುತ್ತಿರುವ ಮಾಹಿತಿಯ ಪ್ರಕಾರ ಸಮುದಾಯಗಳ ಆಧಾರದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ಪ್ರಯತ್ನ ಕಾಂಗ್ರೆಸ್ ನಾಯಕರಿಂದ ನಡೆದಿದೆ. ಒಕ್ಕಲಿಗ ಸಮುದಾಯದಿಂದ ಈಗಿರುವ ಗೋವಿಂದರಾಜ್ ಅವರನ್ನೇ ಮತ್ತೊಂದು ಅವಧಿಗೆ ಮುಂದುವರಿಸೋದಾ ಅಥವಾ ವಿನಯ್ ಕಾರ್ತೀಕ್ ಇಲ್ಲವೇ ಬಿಎಂ ಸಂದೀಪ್ ಅವರಿಗೆ ಅವಕಾಶ ನೀಡೋದಾ ಅಂತ ಚರ್ಚೆಯಾಗಿದೆಯಂತೆ. ಒಬಿಸಿ ಸಮುದಾಯದಿಂದ ಯತೀಂದ್ರ ಸಿದ್ದರಾಮಯ್ಯ ಮತ್ತು ಅತಿ ಹಿಂದುಳಿದ ವರ್ಗಗಳ ಸಮುದಾಯದಿಂದ ಎಂ ಸಿ ವೇಣಗೋಪಾಲ್ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ.

ದಲಿತ ಸಮುದಾಯದ ಅಭ್ಯರ್ಥಿಯ ಹೆಸರನ್ನು ತಾವೇ ಸೂಚಿಸುವುದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಂತೆ. ಮುಸ್ಲಿಂ ಸಮುದಾಯದಿಂದ ಇಸ್ಮಾಯಿಲ್ ತಮಟಗಾರ್ ಮತ್ತು ಸೌದಾಗರ್ ಎನ್ನುವ ಕಾಂಗ್ರೆಸ್ ಮುಖಂಡರ ಹೆಸರುಗಳನ್ನು ಮತುಕತೆ ನಡೆಯುವಾಗ ಪ್ರಸ್ತಾಪಿಸಲಾಗಿದೆ. ಸರ್ಕಾರದಲ್ಲಿ ನಮ್ಮ ಪ್ರತಿನಿಧಿತ್ವ ಇಲ್ಲ ಅಂತ ಕ್ರಿಶ್ಚಿಯನ್ ಸಮುದಾಯದವರು ರಾಜ್ಯದ ಮುಖಂಡರಿಗೆ ಮನವಿ ಮಾಡಿರುವುದರಿಂದ, ಹಿಂದೆ ಪರಿಷತ್ ಸದಸ್ಯರಾಗಿದ್ದ ಐವಾನ್ ಡಿಸೋಜಾ ಇಲ್ಲವೇ ಪ್ರವೀಣ್ ಪೀಟರ್ ಅವರನ್ನು ಪರಿಗಣಿಸುವ ಬಗ್ಗೆ ಚರ್ಚೆಯಾಗಿದೆ ಎಂದು ವರದಿಗಾರ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಾಜ್ಯದಲ್ಲಿ ಚುನಾವಣೆ ಮುಗಿದರೂ ನಿಲ್ಲದು ಚುನಾವಣಾ ತಯಾರಿ! ವಿಧಾನಪರಿಷತ್​ನಲ್ಲಿ ಬಹುಮತದತ್ತ ಕಾಂಗ್ರೆಸ್ ಚಿತ್ತ

Follow us
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ