New Parliament Building: ರವಿವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿರುವ ಹೊಸ ಸಂಸತ್ ಭವನ ಹೇಗಿದೆ ಗೊತ್ತಾ?

New Parliament Building: ರವಿವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿರುವ ಹೊಸ ಸಂಸತ್ ಭವನ ಹೇಗಿದೆ ಗೊತ್ತಾ?
|

Updated on:May 25, 2023 | 4:26 PM

ತ್ರಿಕೋನಾಕಾರದಲ್ಲಿರುವ ಕಟ್ಟಡವನ್ನು  ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಸಂಸ್ಥೆ ನಿರ್ಮಿಸಿದ್ದು 64,500 ಚದರ ಮೀಟರ್ ಜಾಗದಲ್ಲಿ ಇದನ್ನು ಕಟ್ಟಲಾಗಿದೆ.

ದೆಹಲಿ: ಸೆಂಟ್ರಲ್ ವಿಸ್ತಾ ಪುನರ್ ನಿರ್ಮಾಣ ಯೋಜನೆಯ (Central Vista Redevelopment Project) ಭಾಗವಾಗಿರುವ ಹೊಸ ಸಂಸತ್ ಭವನದ (new Parliament building) ಲೋಕರ್ಪಾಣೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ರವಿವಾರ (ಮೇ 28) ರಂದು ನೆರವೇರಿಸಲಿದ್ದಾರೆ. ರೂ. 970 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಭವ್ಯ ಕಟ್ಟಡ ಪ್ರಧಾನಿ ಮೋದಿಯವರ ಕನಸಿನ ಕೂಸು. ತ್ರಿಕೋನಾಕಾರದಲ್ಲಿರುವ ಕಟ್ಟಡವನ್ನು  ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಸಂಸ್ಥೆ ನಿರ್ಮಿಸಿದ್ದು 64,500 ಚದರ ಮೀಟರ್ ಜಾಗದಲ್ಲಿ ಇದನ್ನು ಕಟ್ಟಲಾಗಿದೆ. ಕಟ್ಟಡವು ಲೋಕ ಸಭಾ, ರಾಜ್ಯ ಸಭಾ, ಕೇಂದ್ರೀಯ ಹಾಲ್ ಮತ್ತು ಸಂವೈಧಾನಿಕ ಅಧಿಕಾರಿಗಳ ಕಚೇರಿಗಳನ್ನು ಒಳಗೊಂಡಿದೆ. ಲೋಕ ಸಭೆಯ ಆಂಗಣವನ್ನು ಭಾರತದ ರಾಷ್ಟ್ರೀಯ ಪಕ್ಷಿ ನವಿಲಿನ ಹಾಗೆ ವಿನ್ಯಾಸಗೊಳಿಸಲಾಗಿದೆ. ಹಾಗೆಯೇ ರಾಜ್ಯ ಸಭೆಯ ಆಂಗಣವು ಭಾರತದ ರಾಷ್ಟ್ರೀಯ ಹೂವು ಎನಿಸಿಕೊಂಡಿರುವ ಕಮಲವನ್ನು ಹೋಲುತ್ತದೆ. 1947 ರಲ್ಲಿ ಭಾರತ ಬ್ರಿಟಿಷ್ ಆಡಳಿತದಿಂದ ಮುಕ್ತವಾದ ಬಳಿಕ ಅಧಿಕಾರ ಹಸ್ತಾಂತರದ ಸಂಕೇತವಾಗಿ ಆಗಿನ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವೀಕರಿಸಿದ ಹೊನ್ನಿನ ರಾಜದಂಡವನ್ನು ಹೊಸ ಸಂಸತ್ ಭವನದಲ್ಲಿ ಇಡಲಾಗಿದೆ. ಭವನದಲ್ಲಿ 888 ಲೋಕ ಸಭಾ ಸದಸ್ಯರು ಮತ್ತು 384 ರಾಜ್ಯ ಸಭಾ ಸದಸ್ಯರು ಕುಳಿತುಕೊಳ್ಳಲು ಆಸನಗಳನ್ನು ಕಲ್ಪಿಸಲಾಗಿದೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 4:25 pm, Thu, 25 May 23

Follow us
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ