AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್‌ ಸರ್ಕ್ಯೂಟ್​ನಿಂದ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಶಾರ್ಟ್‌ ಸರ್ಕ್ಯೂಟ್​ನಿಂದ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಬಿ ಮೂರ್ತಿ, ನೆಲಮಂಗಲ
| Edited By: Rakesh Nayak Manchi|

Updated on: Nov 12, 2023 | 3:12 PM

Share

ಶಾರ್ಟ್‌ ಸರ್ಕ್ಯೂಟ್​ನಿಂದ ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿದ್ದು, ಒಂಬತ್ತು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೆಲಮಂಗಲ, ನ.12: ಶಾರ್ಟ್‌ ಸರ್ಕ್ಯೂಟ್​ನಿಂದ ಚಲಿಸುತ್ತಿದ್ದ ಬಿಎಂಟಿಸಿ (BMTC) ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ಟೌನ್​ನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿದೆ. ಹೌದು, ನೆಲಮಂಗಲದಿಂದ ಮೆಜೆಸ್ಟಿಕ್‌ಗೆ ಸಂಚರಿಸುತ್ತಿದ್ದ ಬಸ್‌ನ ಬ್ಯಾಟರಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಬಸ್‌ ಚಾಲಕ ಸೋಮಶೇಖರ್ ಅವರು ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಇನ್ಸ್‌ಪೆಕ್ಟರ್ ಶಶಿಧರ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More