ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ

Edited By:

Updated on: Nov 26, 2025 | 7:46 PM

ಗೋವುಗಳನ್ನ ಸಾಗಿಸುತ್ತಿದ್ದ ಲಾರಿಯನ್ನ ತಡೆದು ಪರಿಶೀಲನೆ ಮಾಡಿದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕಲಬುರಗಿ ನಗರದ ರಿಂಗ್ ರಸ್ತೆಯ ರಾಮನಗರದ ಬಳಿ ನಡೆದಿದೆ. ಅಫಜಲಪುರದಿಂದ ಆಳಂದ ಕಡೆಗೆ ತೆರಳುತ್ತಿದ್ದ ಗೋವು ತುಂಬಿದ್ದ ಲಾರಿಯನ್ನು ರೋಹಿತ್ ಮತ್ತು ಅನೀಲ್ ತಡೆ ನಿಲ್ಲಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿಯಾಗಿದೆ. ದಾಖಲಾತಿ ಜೊತೆಗೆ ಅನುಮತಿ ಪಡೆದು ಗೋವು ಸಾಗಾಟ ಮಾಡುತ್ತಿರುವ ಗಾಡಿಯನ್ನ ತಡೆಯುತ್ತಿರಾ ಎಂದು ರೋಹಿತ್ ಮತ್ತು ಅನೀಲ್ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ವಿಡಿಯೋ ಮೊಬೈಲ್​​ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಕಲಬುರಗಿ ಸಬ್ ಅರ್ಬನ್ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ

ಕಲಬುರಗಿ, (ನವೆಂಬೆರ್ 26): ಗೋವುಗಳನ್ನ ಸಾಗಿಸುತ್ತಿದ್ದ ಲಾರಿಯನ್ನ ತಡೆದು ಪರಿಶೀಲನೆ ಮಾಡಿದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕಲಬುರಗಿ ನಗರದ ರಿಂಗ್ ರಸ್ತೆಯ ರಾಮನಗರದ ಬಳಿ ನಡೆದಿದೆ. ಅಫಜಲಪುರದಿಂದ ಆಳಂದ ಕಡೆಗೆ ತೆರಳುತ್ತಿದ್ದ ಗೋವು ತುಂಬಿದ್ದ ಲಾರಿಯನ್ನು ರೋಹಿತ್ ಮತ್ತು ಅನೀಲ್ ತಡೆ ನಿಲ್ಲಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿಯಾಗಿದೆ. ದಾಖಲಾತಿ ಜೊತೆಗೆ ಅನುಮತಿ ಪಡೆದು ಗೋವು ಸಾಗಾಟ ಮಾಡುತ್ತಿರುವ ಗಾಡಿಯನ್ನ ತಡೆಯುತ್ತಿರಾ ಎಂದು ರೋಹಿತ್ ಮತ್ತು ಅನೀಲ್ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ವಿಡಿಯೋ ಮೊಬೈಲ್​​ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಕಲಬುರಗಿ ಸಬ್ ಅರ್ಬನ್ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More