ಸಿಸಿಎಲ್​ಗೂ ಮೊದಲು ಪುನೀತ್ ಸಮಾಧಿಗೆ ಟಾಲಿವುಡ್ ಸೆಲೆಬ್ರಿಟಿಗಳ ಭೇಟಿ

Updated on: Feb 08, 2025 | 2:57 PM

ಕರ್ನಾಟಕ ಬುಲ್ಡೋಜರ್ಸ್ ತಂಡವು ಇಂದು ಟಾಲಿವುಡ್ ತಂಡದ ವಿರುದ್ಧ ಸಿಸಿಎಲ್​​ನಲ್ಲಿ ಆಡಲಿದೆ. ಈ ವೇಳೆ ಪುನೀತ್ ರಾಜ್​ಕುಮಾರ್ ಅವರ ಸಮಾಧಿಗೆ ಟಾಲಿವುಡ್​ ಸೆಲೆಬ್ರಿಟಿಗಳು ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಇಂದು (ಫೆಬ್ರವರಿ 8) ಕರ್ನಾಟಕ ಬುಲ್ಡೋಜರ್ಸ್ ತಂಡ ಟಾಲಿವುಡ್ ವಿರುದ್ಧ ಸೆಣೆಸಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯಕ್ಕಾಗಿ ಟಾಲಿವುಡ್ ಸೆಲೆಬ್ರಿಟಿಗಳು ಬೆಂಗಳೂರಿಗೆ ಬಂದಿದ್ದಾರೆ. ಸಂಗೀತ ಸಂಯೋಜಕ ಎಸ್​. ಥಮನ್ ಸೇರಿದಂತೆ ಅನೇಕರು ಇದರಲ್ಲಿ ಭಾಗಿ ಆಗುತ್ತಿದ್ದಾರೆ. ಇವರು ಈಗ ಪುನೀತ್ ರಾಜ್​ಕುಮಾರ್ ಸಮಾಧಿಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More