Muharram: ಮೊಹರಂ ವೇಳೆ ಅಗ್ನಿಕುಂಡದಲ್ಲಿ‌ ಕಂಬಳಿ ಹಾಸಿ ನಮಾಜ್ ಮಾಡಿದ ಹಿಂದೂ ಯುವಕ

Edited By: ಆಯೇಷಾ ಬಾನು

Updated on: Jul 18, 2024 | 1:58 PM

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಚೀರಲಕೊಪ್ಪ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆ ಹಿಂದೂ ಯುವಕನೋರ್ವ ಅಗ್ನಿಕುಂಡಕ್ಕೆ ಪ್ರವೇಶ ಮಾಡಿ ಕಂಬಳಿ ಹಾಸಿ ದೇವರ ಮುಂದೆ ಮೂರು ಬಾರಿ ಮಂಡಿಯೂರಿ ಶಿರ ಬಾಗಿ ನಮಸ್ಕರಿಸಿದ್ದಾರೆ. ಸದ್ಯ ಯುವಕನ ಈ ವಿಡಿಯೋ ವೈರಲ್ ಆಗುತ್ತಿದೆ.

ಬಾಗಲಕೋಟೆ, ಜುಲೈ.18: ಮುಸ್ಲಿಮರ ಹೊಸ ವರ್ಷ ಹಾಘೂ ಪವಿತ್ರ ಹಬ್ಬವಾಗಿರುವ ಮೊಹರಂ (Muharram) ಭಾವೈಕ್ಯತೆಯ ಸಂಕೇತ. ಈ ಹಬ್ಬವನ್ನು ಜಾತಿ, ಧರ್ಮ ಮರೆತು ಎಲ್ಲಾ ಧರ್ಮದವರು ಒಂದಾಗಿ ಆಚರಿಸುತ್ತಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಚೀರಲಕೊಪ್ಪ ಗ್ರಾಮದಲ್ಲಿ ನಿನ್ನೆ ರಾತ್ರಿ ಮೊಹರಂ ಆಚರಿಸಲಾಗಿದೆ. ಈ ವೇಳೆ ಮೊಹರಂ ಅಗ್ನಿಕುಂಡದಲ್ಲೇ ಹಿಂದೂ ಯುವಕನೋರ್ವ ನಮಾಜ್ ಮಾಡಿದಂತೆ ದೇವರಲ್ಲಿ ಪ್ರಾರ್ಥಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮೊಹರಂ ಹಬ್ಬದ ಹಿನ್ನೆಲೆ ಆಲೆ ದೇವರ ಮೆರವಣಿವೆ ವೇಳೆ ಈ ಘಟನೆ ನಡೆದಿದೆ. ಹಸೇನ್‌ ಹುಸೇನ್ ಮೌಲಾ ದರ್ಗಾದ ಎದುರು ಅಗ್ನಿಕುಂಡ ಹಾಕಲಾಗಿತ್ತು. ಫಕ್ಕೀರಪ್ಪ ಕುರಿ ಎಂಬ ಹಿಂದೂ ಯುವಕ ಅಗ್ನಿಕುಂಡ ಪ್ರವೇಶಿಸಿ ಕಂಬಳಿ ಹಾಸಿ ಮೂರು ಬಾರಿ ಮಂಡಿಯೂರಿ ಶಿರ ಬಾಗಿ ದೇವರನ್ನು ನಮಸ್ಕರಿಸಿದ್ದಾನೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More