ಮೈಸೂರಿನ ಮೈಮುಲ್‌ ಚುನಾವಣೆಯಲ್ಲಿ ಹೆಚ್‌ ಡಿ ಕುಮಾರಸ್ವಾಮಿಗೆ ಭಾರೀ ಮುಖಭಂಗ
ಮೈಸೂರಿನ ಮೈಮುಲ್‌ ಚುನಾವಣೆಯಲ್ಲಿ ಹೆಚ್‌ ಡಿ ಕುಮಾರಸ್ವಾಮಿಗೆ ಭಾರೀ ಮುಖಭಂಗ

ಮೈಸೂರಿನ ಮೈಮುಲ್‌ ಚುನಾವಣೆಯಲ್ಲಿ ಹೆಚ್‌ ಡಿ ಕುಮಾರಸ್ವಾಮಿಗೆ ಭಾರೀ ಮುಖಭಂಗ

ಸಾಧು ಶ್ರೀನಾಥ್​

Updated on: Mar 18, 2021 | 3:31 PM

ಮೈಸೂರಿನಲ್ಲಿ ಸ್ಥಳೀಯ ಚುನಾವಣೆಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹತ್ವ ಪಡೆದುಕೊಳ್ಳುತ್ತಿವೆ. ಹಾಗೇನೆ ರಾಜ್ಯ ನಾಯಕರ ಹಾಗೂ ಸ್ಥಳೀಯ ಮುಖಂಡರ ನಡುವೆ ಜಟಾಪಟಿಗೆ ಕಾರಣವಾಗ್ತಿವೆ. ಮೈಸೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಗೆ ಸಂಬಂಧಿಸಿದಂತೆ ಜಿಟಿ ದೇವೇಗೌಡ ಅವರನ್ನ ಮುಗಿಸಲು ಹೋಗಿ ಸ್ವತಃ ಕುಮಾರಸ್ವಾಮಿಯೇ ಮಣ್ಣುಮುಕ್ಕಿದ್ದಾರೆ… ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವ ಹಂತ ತಲುಪಿದ ಗಲಾಟೆ. ಎಲ್ಲರನ್ನೂ ಸಮಾಧಾನಪಡಿಸಲು ಯತ್ನಿಸುತ್ತಿರುವ ಪೊಲೀಸರು. ಇದು ಮೈಸೂರಿನ ಆಲನಹಳ್ಳಿ ಮೆಗಾ ಡೈರಿ ಆವರಣದಲ್ಲಿ ನಡೆದ ಮೈ ಮುಲ್ ನಿರ್ದೇಶಕರ ಚುನಾವಣೆಯಲ್ಲಿ […]

ಮೈಸೂರಿನಲ್ಲಿ ಸ್ಥಳೀಯ ಚುನಾವಣೆಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹತ್ವ ಪಡೆದುಕೊಳ್ಳುತ್ತಿವೆ. ಹಾಗೇನೆ ರಾಜ್ಯ ನಾಯಕರ ಹಾಗೂ ಸ್ಥಳೀಯ ಮುಖಂಡರ ನಡುವೆ ಜಟಾಪಟಿಗೆ ಕಾರಣವಾಗ್ತಿವೆ. ಮೈಸೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಗೆ ಸಂಬಂಧಿಸಿದಂತೆ ಜಿಟಿ ದೇವೇಗೌಡ ಅವರನ್ನ ಮುಗಿಸಲು ಹೋಗಿ ಸ್ವತಃ ಕುಮಾರಸ್ವಾಮಿಯೇ ಮಣ್ಣುಮುಕ್ಕಿದ್ದಾರೆ…

ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವ ಹಂತ ತಲುಪಿದ ಗಲಾಟೆ. ಎಲ್ಲರನ್ನೂ ಸಮಾಧಾನಪಡಿಸಲು ಯತ್ನಿಸುತ್ತಿರುವ ಪೊಲೀಸರು. ಇದು ಮೈಸೂರಿನ ಆಲನಹಳ್ಳಿ ಮೆಗಾ ಡೈರಿ ಆವರಣದಲ್ಲಿ ನಡೆದ ಮೈ ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಂಡು ಬಂದ ಝಲಕ್. ಹೌದು ಈ ಬಾರಿಯ ಮೈಮುಲ್ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು.

ಇದಕ್ಕೆ ಕಾರಣ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡರ‌ ನಡುವಿನ ಜಿದ್ದಾಜಿದ್ದಿನ ಹಣಾಹಣಿ. ಈ ಬಾರಿ ಮೈ ಮುಲ್ ಚುನಾವಣೆ ಹೆಚ್‌ಡಿಕೆ ವರ್ಸಸ್ ಜಿಟಿಡಿ ಅನ್ನೋ ರೇಂಜ್‌ಗೆ ಹೋಗಿತ್ತು.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು