ಊರು ಹಬ್ಬಗಳು, ಸಮ್ಮರ್​​ ಸೀಸನ್​ ಶುರುವಾಗಿದೆ – ನಿಂಬೆ ಹಣ್ಣಿನ ಬೆಲೆ ಎಷ್ಟು ಗೊತ್ತಾ?

Updated on: Mar 13, 2024 | 9:39 AM

Chennai: ತಮಿಳುನಾಡಿನ ಗ್ರಾಮವೊಂದರಲ್ಲಿ ಒಂದು ನಿಂಬೆಹಣ್ಣಿನ ಬೆಲೆ 35 ಸಾವಿರ ರೂಪಾಯಿ ಇದೆ. ಹೌದು ನೀವು ಕೇಳಿದ್ದು ಸರಿ. ಏನಪ್ಪಾ ಆ ನಿಂಬೆಹಣ್ಣಿನ ವಿಶೇಷತೆ ಅಂತಂದರೆ ತಮಿಳುನಾಡಿನ ಶಿವಗರಿ ಗ್ರಾಮದ ಶಿವನ ದೇವಸ್ಥಾನದಲ್ಲಿ ಇದೇ ತಿಂಗಳ 8ರಂದು ನಡೆದ ವಿಶೇಷ ಪೂಜೆ ನಡೆಯಿತು. ಆಗ ಭಕ್ತರು ದುಬಾರಿ ಬೆಲೆ ಕೊಟ್ಟು 35 ರೂಪಾಯಿಗೆ ಒಂದು ನಿಂಬೆಹಣ್ಣನ್ನು ಖರೀದಿ ಮಾಡಿದರು.

ಬೇಸಿಗೆ ಕಾಲಿಡುತ್ತಿದ್ದಂತೆ, ನಾನಾ ಕಡೆ ಊರು ಹಬ್ಬಗಳು ಶುರುವಾಗುತ್ತಿದ್ದಂತೆ ನಿಂಬೆ ಹಣ್ಣಿನ ಬೆಲೆ ಸೀದಾ ಗಗನಕ್ಕೆ ಚಿಮ್ಮುತ್ತದೆ. ವಾಸ್ತವವಾಗಿ ಅದು ನಿಂಬೆ ಬೆಳೆ ಕಟಾವು ಕಾಲ. ಆವಕ ಚೆನ್ನಾಗಿರುತ್ತದೆ. ಗಮನಾರ್ಹವೆಂದರೆ ಆಗತಾನೆ ಚಳಿಗಾಲದ ಸೀಸನ್​ ಮುಗಿದಿರುತ್ತದೆ. ಆ ಕಾಲದಲ್ಲಿ ನಿಂಬೆ ಹಣ್ಣು ಬಳಕೆ ಕಡಿಮೆಯಿದ್ದು ಅದರ ಬೆಲೆಯೂ ಕಡಿಮೇ ಆಗಿರುತ್ತದೆ. ಏಕೆಂದರೆ ಆ ಕಾಲದಲ್ಲಿ ನಿಂಬೆಗೆ ಬೇಡಿಕೆ ತಗ್ಗಿರುತ್ತದೆ. ಚಳಿಗಾಲದಲ್ಲಿ ನಿಂಬೆಹಣ್ಣು ಬಳಸುವುದು ಕಡಿಮೆ ಹಾಗಾಗಿ ಖರೀದಿಯೂ ಕಡಿಮೆಯಿದ್ದು, ಬೆಲೆ ಕಡಿಮೆಯೇ ಇರುತ್ತದೆ. ಮಾರುಕಟ್ಟೆಯಲ್ಲಿ 21 ರೂಪಾಯಿಗೆ 5 ಹಣ್ಣು ಮಾರಾಟ ವಾಗುತ್ತಿರುತ್ತದೆ. ಅದೇ ಬೇಸಿಗೆ ಕಾಲಿಡುತ್ತಿದ್ದಂತೆ ನಿಂಬೆಗೆ ಎಲ್ಲಿಲ್ಲದ ಬೇಡಿಕೆ ಬಂದುಬಿಡುತ್ತದೆ. ಒಂದು ನಿಂಬೆ ಹಣ್ಣು ಬೆಲೆಯೇ 10 ರೂಪಾಯಿಗೆ ಚಿಮ್ಮಿಬಿಡುತ್ತದೆ. ಮಾರುಕಟ್ಟೆಯಲ್ಲಿ ಚೌಕಾಸಿಗೆ ಅವಕಾಶವೇ ಇಲ್ಲದಂತೆ ವ್ಯಾಪಾರಿಗಳು ಖರೀದಿದಾರರನ್ನು ಹಚಾ ಎನ್ನುವುದೂ ಉಂಟು. ಈಗ ಬೆಂಗಳೂರಿನಲ್ಲಂತೂ ಬಿಡಿ ನಿಂಬೆಹಣ್ಣು ಕೇಳುವ ಹಾಗೇ ಇಲ್ಲ. ಇನ್ನು ಯುಗಾದಿ, ರಾಮನವಮಿ ವೇಳೆಗೆ ನಿಂಬೆ ಹಣ್ಣು ಖರೀದಿ ಮತ್ತಷ್ಟು ದುಬಾರಿಯಾಗಲಿದೆ.

ಇನ್ನು ಬೇಸಿಗೆಯ ಬಯಲು ಪ್ರದೇಶಗಳಾದ ಆಂಧ್ರ, ತಮಿಳುನಾಡಿನಲ್ಲಿಯೂ ನಿಂಬೆಹಣ್ಣಿನ ಬೆಲೆ ಹೆಚ್ಚಾಗಿದೆ. ಇದೆಲ್ಲದರ ಆಚೆಗೆ ನೋಡುವುದಾದರೆ ತಮಿಳುನಾಡಿನ ಗ್ರಾಮವೊಂದರಲ್ಲಿ ಒಂದು ನಿಂಬೆಹಣ್ಣಿನ ಬೆಲೆ 35 ಸಾವಿರ ರೂಪಾಯಿ ಇದೆ. ಹೌದು ನೀವು ಕೇಳಿದ್ದು ಸರಿ. ಏನಪ್ಪಾ ಆ ನಿಂಬೆಹಣ್ಣಿನ ವಿಶೇಷತೆ ಅಂತಂದರೆ ತಮಿಳುನಾಡಿನ ಶಿವಗರಿ ಗ್ರಾಮದ ಶಿವನ ದೇವಸ್ಥಾನದಲ್ಲಿ ಇದೇ ತಿಂಗಳ 8ರಂದು ನಡೆದ ವಿಶೇಷ ಪೂಜೆ ನಡೆಯಿತು. ಆ ವೇಳೆ ನಿಂಬೆಹಣ್ಣು ಮತ್ತು ಇತರ ಪೂಜಾ ಸಾಮಗ್ರಿಗಳನ್ನು ಹರಾಜು ಹಾಕಲಾಯಿತು. ಆಗ ಭಕ್ತರು ಇಷ್ಟೊಂದು ದುಬಾರಿ ಬೆಲೆ ಕೊಟ್ಟು ಖರೀದಿ ಮಾಡಿದರು. ಹೀಗೆ ಖರೀದಿ ಂಆಡಿದ ನಿಂಬೆಹಣ್ಣನ್ನು ಮನೆಗೆ ತೆಗೆದುಕೊಂಡು ಹೋದರೆ ಒಳಿತಾಗುತ್ತದೆ ಎಂ-ದು ಅಲ್ಲಿನ ಭಕ್ತರು ನಂಬುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರತಾಪ್ ಸಿಂಹ ಬೈ ಬರ್ತ್ ರೈಟರ್ ಇರಬಹುದು, ನಾನು ಫೈಟರ್: ಗುಡುಗಿದ ಪ್ರದೀಪ್ ಈಶ್ವರ್ 

Published on: Mar 13, 2024 09:39 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More