ಒಂದು ಬಾರಿ ನಾಯಿ ಕಚ್ಚಿಕೊಂಡು ಹೋಗಿದ್ದ ಚಿರತೆ; ಮತ್ತೊಮ್ಮೆ ಎಂಟ್ರಿಕೊಟ್ಟು ಏನೂ ಸಿಗದೇ ತೆರಳಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಜಿಲ್ಲೆಯ ಶಿರಸಿಯಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿದ್ದು, ತಾಲೂಕಿನ ತಲ್ಲಿನಮನೆಯಲ್ಲಿ ಚಿರತೆಯೊಂದು, ಒಂದು ಬಾರಿ ನಾಯಿಯನ್ನು ಕಚ್ಚಿಕೊಂಡು ಹೋಗಿ, ಮತ್ತೊಂದು ಬಾರಿ ಅದೇ ಮನೆಗೆ ಬಂದು ಏನೂ ಸಿಗದೇ ನಿರಾಸೆಯಿಂದ ಮರಳಿದ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಒಂದು ಬಾರಿ ನಾಯಿ ಕಚ್ಚಿಕೊಂಡು ಹೋಗಿದ್ದ ಚಿರತೆ; ಮತ್ತೊಮ್ಮೆ ಎಂಟ್ರಿಕೊಟ್ಟು ಏನೂ ಸಿಗದೇ ತೆರಳಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 01, 2023 | 12:07 PM

ಉತ್ತರ ಕನ್ನಡ: ರಾಜ್ಯದ ಹಲವೆಡೆ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದೆ. ಅದರಂತೆ ಜಿಲ್ಲೆಯ ಶಿರಸಿ(Sirsi)ಯಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿದ್ದು, ತಾಲೂಕಿನ ತಲ್ಲಿನಮನೆಯಲ್ಲಿ ಚಿರತೆಯೊಂದು, ಒಂದು ಬಾರಿ ನಾಯಿಯನ್ನು ಕಚ್ಚಿಕೊಂಡು ಹೋಗಿ, ಮತ್ತೊಂದು ಬಾರಿ ಅದೇ ಮನೆಗೆ ಬಂದು ಏನೂ ಸಿಗದೇ ನಿರಾಸೆಯಿಂದ ಮರಳಿದ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಶಿರಸಿಯ ಹುಲೇಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ತಲ್ಲಿನಮನೆಯ ರಾಮಕೃಷ್ಣ ‌ಹೆಗಡೆ ಎಂಬವರ ಮನೆಗೆ ಚಿರತೆ ಬಂದು ಮನೆಯ ಬಾಗಿಲಿನಲ್ಲಿ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಹೋಗಿತ್ತು.

ಇದಾದ ಕೆಲವು ದಿನಗಳ ಬಳಿಕ ಪುನಃ ಅದೇ ಚಿರತೆ ನಾಯಿ ಹುಡುಕಿಕೊಂಡು ಅದೇ ಮನೆಗೆ ವಾಪಾಸ್ ಬಂದಿದೆ. ‌ಆದರೆ, ನಾಯಿ ಸಿಗದ ಕಾರಣ ಮನೆ ಬಾಗಿಲಿನಲ್ಲಿ ಅತ್ತಿತ್ತ ಹುಡುಕಾಟ ನಡೆಸಿದ್ದು, ನಿರಾಸೆಯಿಂದ ತೆರಳಿದೆ. ಇದೆಲ್ಲವೂ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಘಟನೆಯಿಂದ ಮನೆಯವರೂ ಸೇರಿದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚು ಮಾಡಿದೆ. ತಲ್ಲಿನಮನೆಯ ದಾರಿಯಲ್ಲಿ ಶಾಲಾ ಮಕ್ಕಳು ಕೂಡ ಓಡಾಡುತ್ತಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನು ಹಿಡಿದು ಬೇರೆಡೆಗೆ ಸಾಗಿಸಬೇಕೆಂಬ ಒತ್ತಾಯ ವ್ಯಕ್ತವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ