ಬುರ್ಖಾ ಧರಿಸಿ ಓಡಾಡ್ತಿದ್ದ ಪುರುಷನಿಗೆ ಧರ್ಮದೇಟು; ಬ್ಯಾಗಿನಲ್ಲಿ ಸಿಕ್ತು ಚಾಕು

Edited By: ಕಿರಣ್ ಹನುಮಂತ್​ ಮಾದಾರ್

Updated on: Jun 14, 2024 | 6:02 PM

ಇಳಕಲ್ ನಗರದ ಎಸಿಒ ಪ್ರಾಥಮಿಕ ಶಾಲೆ ಬಳಿ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರನ್ನ ತಡೆದು ಬುರ್ಖಾ ತೆರೆದು ನೋಡಿದಾಗ ಅಚ್ಚರಿಯಾಗಿದ್ದು, ಪುರುಷನೂರ್ವ ಬುರ್ಖಾ ಧರಿಸಿ ತಿರುಗಾಡುತ್ತಿರುವುದು ಬೆಳಕಿಗೆ ಬಂದಿದೆ. ಜೊತೆಗೆ ಆತನ ಬಗಲಲ್ಲಿದ್ದ ಬ್ಯಾಗಿನಲ್ಲಿ ಚಾಕು ಕೂಡ ಪತ್ತೆಯಾಗಿದೆ.

ಬಾಗಲಕೋಟೆ, ಜೂ.14: ಇಳಕಲ್ ನಗರದ ಎಸಿಒ ಪ್ರಾಥಮಿಕ ಶಾಲೆ ಬಳಿ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರನ್ನ ತಡೆದು ಬುರ್ಖಾ ತೆರೆದು ನೋಡಿದಾಗ ಅಚ್ಚರಿಯಾಗಿದ್ದು, ಪುರುಷನೂರ್ವ ಬುರ್ಖಾ ಧರಿಸಿ ತಿರುಗಾಡುತ್ತಿರುವುದು ಬೆಳಕಿಗೆ ಬಂದಿದೆ. ಜೊತೆಗೆ ಆತನ ಬಗಲಲ್ಲಿದ್ದ ಬ್ಯಾಗಿನಲ್ಲಿ ಚಾಕು ಕೂಡ ಪತ್ತೆಯಾಗಿದೆ. ಅಂದಾಜು 35 ರಿಂದ 40 ವರ್ಷ ವಯೋಮಾನದ ವ್ಯಕ್ತಿಯಾಗಿದ್ದು, ಬುರ್ಖಾ ಧರಿಸಿ ಸುತ್ತಾಟ ನಡೆಸಿದ್ದ. ವಿಷಯ ತಿಳಿಯುತ್ತಿದ್ದ ಜಮಾಯಿಸಿದ ಜನರು ಧರ್ಮದೇಟು ಕೊಟ್ಟಿದ್ದಾರೆ. ಜೊತೆಗೆ ಮಹಿಳೆಯರು ಸೇರಿಕೊಂಡು ಚಪ್ಪಲಿ ಏಟು ಕೊಟ್ಟು ಕಪಾಳ‌ ಮೋಕ್ಷ‌‌ ಮಾಡಿ ಹಲ್ಲೆ ಮಾಡಿದ್ದಾರೆ. ಮನಸೋ ಇಚ್ಚೆ ಥಳಿಸಿದ ಬಳಿಕ ಇಳಕಲ್ ‌ನಗರ ಠಾಣೆಗೆ ಒಪ್ಪಿಸಿದ್ದಾರೆ. ಇಳಕಲ್ ಪೊಲೀಸರು ಈ ಕುರಿತು ವಿಚಾರಣೆ ನಡೆಸಿದ್ದಾರೆ. ಇನ್ನು ಜನರು ಯಾಕೆ ಬುರ್ಖಾ ಯಾಕೆ ಧರಿಸಿದ್ದಿಯಾ?, ಚಾಕು ಏಕೆ ಇಟ್ಕೊಂಡಿದಿಯಾ ಎಂದು ಕೇಳಿದಾಗ ಉತ್ತರಿಸಿದ ಆತ ನನ್ನ ತಲೆ‌ಸರಿಯಿಲ್ಲ ಎಂದಿದ್ದಾನೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More