ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧಿಸಿದಂತೆ ಚರ್ಚಿಸಲು ಗುರುವಾರ ಒಂದು ಸಭೆ ಕರೆಯಲಾಗಿದೆ: ಹೆಚ್ ಡಿ ಕುಮಾರಸ್ವಾಮಿ

ಸಭೆಯಲ್ಲಿ ಎಲ್ಲ ಸಾಧಕ ಬಾಧಕಗಳನ್ನು ಚರ್ಚಿಸಿದ ಬಳಿಕ ಮೈತ್ರಿಯ ಸ್ವರೂಪದ ಬಗ್ಗೆ ಒಂದು ಚಿತ್ರಣ ಸಿಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಸೀಟು ಹೊಂದಾಣಿಕೆ ಬಗ್ಗೆ ಎರಡು ಪಕ್ಷಗಳ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಕಳೆದ‌ 2 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಕೆಟ್ಟ ಅಡಳಿತ ನೀಡಿರುವ ಹಿನ್ನೆಲೆಯಲ್ಲಿ ಒಂದು ಬಲಿಷ್ಠ ವಿರೋಧ ಪಕ್ಷದ ಅವಶ್ಯಕತೆಯನ್ನು ಬಿಜೆಪಿ ಮತ್ತು ತಮ್ಮ ಪಕ್ಷಗಳ ನಾಯಕರು ಮನಗಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧಿಸಿದಂತೆ ಚರ್ಚಿಸಲು ಗುರುವಾರ ಒಂದು ಸಭೆ ಕರೆಯಲಾಗಿದೆ: ಹೆಚ್ ಡಿ ಕುಮಾರಸ್ವಾಮಿ
|

Updated on: Sep 20, 2023 | 6:36 PM

ರಾಮನಗರ: ಲೋಕಸಭಾ ಚುನಾವಣೆಗೆ (Lok Sabha Polls) ಮೊದಲು ಜೆಡಿಎಸ್-ಬಿಜೆಪಿ ನಡುವಿನ ಮೈತ್ರಿ (BJP-JDS alliance) ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ. ಇದುವರೆಗೆ ಯಾವುದೇ ನಿರ್ಧಾರವನ್ನು ಎರಡೂ ಪಕ್ಷಗಳು ಪ್ರಕಟಿಸಿಲ್ಲ ಎಂದು ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು. ಜಿಲ್ಲೆಯ ಚನ್ನಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಕುಮಾರಸ್ವಾಮಿ, ಇದುವರೆಗೆ ಕೇವಲ ಊಹಾಪೋಹಗಳು ಕೇಳಿಬಂದಿವೆ, ಮಾತುಕತೆ ಮಾತ್ರ ನಡೆದಿಲ್ಲ. ಮೈತ್ರಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಒಂದು ಸಭೆಯನ್ನು ಗರುವಾರ ಕರೆಯಲಾಗಿದೆ. ಸಭೆಯಲ್ಲಿ ಎಲ್ಲ ಸಾಧಕ ಬಾಧಕಗಳನ್ನು ಚರ್ಚಿಸಿದ ಬಳಿಕ ಮೈತ್ರಿಯ ಸ್ವರೂಪದ ಬಗ್ಗೆ ಒಂದು ಚಿತ್ರಣ ಸಿಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಸೀಟು ಹೊಂದಾಣಿಕೆ ಬಗ್ಗೆ ಎರಡು ಪಕ್ಷಗಳ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಕಳೆದ‌ 2 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಕೆಟ್ಟ ಅಡಳಿತ ನೀಡಿರುವ ಹಿನ್ನೆಲೆಯಲ್ಲಿ ಒಂದು ಬಲಿಷ್ಠ ವಿರೋಧ ಪಕ್ಷದ ಅವಶ್ಯಕತೆಯನ್ನು ಬಿಜೆಪಿ ಮತ್ತು ತಮ್ಮ ಪಕ್ಷಗಳ ನಾಯಕರು ಮನಗಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ಸಿಎಂಗೆ ತಾಕತ್ತಿದ್ದರೆ ತನ್ವೀರ್ ಪೀರಾ ವಿರುದ್ಧ ತನಿಖೆ ನಡೆಸಲಿ: ಯತ್ನಾಳ್
ಸಿಎಂಗೆ ತಾಕತ್ತಿದ್ದರೆ ತನ್ವೀರ್ ಪೀರಾ ವಿರುದ್ಧ ತನಿಖೆ ನಡೆಸಲಿ: ಯತ್ನಾಳ್