AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಜಿಲ್ಲೆಯ ಕುಮಾರಸ್ವಾಮಿ ಕುಟುಂಬ ಸ್ಥಳೀಯನಾದ ನನ್ನ ಮೇಲೆ ದಬ್ಬಾಳಿಕೆ ನಡೆಸುತ್ತಿದೆ: ಯೋಗೇಶ್ವರ್

ಬೇರೆ ಜಿಲ್ಲೆಯ ಕುಮಾರಸ್ವಾಮಿ ಕುಟುಂಬ ಸ್ಥಳೀಯನಾದ ನನ್ನ ಮೇಲೆ ದಬ್ಬಾಳಿಕೆ ನಡೆಸುತ್ತಿದೆ: ಯೋಗೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 02, 2024 | 1:00 PM

Share

ಮಂಕುಂದ, ತಲಕಾಡು ಸೇರಿದಂತೆ ಹಳೆ ಮೈಸೂರು ಪ್ರಾಂತ್ಯದಲ್ಲಿ ಗಂಗರು ಆಳ್ವಿಕೆ ನಡೆಸಿದ್ದಾರೆ ಹಾಗಾಗಿ ಇಲ್ಲಿನ ಜನರಲ್ಲಿ ನಾಯಕತ್ವದ ಗುಣ ಸ್ವಾಭಾವಿಕವಾಗಿ ಬಂದಿದೆ, ಜನರಿಗೆ ಇತಿಹಾಸವನ್ನು ಗೊತ್ತು ಮಾಡಲು ಈ ಭಾಗದಲ್ಲೊಂದು ಸಂಶೋಧನಾ ಕೇಂದ್ರ ಸ್ಥಾಪಿಸಬೇಕೆಂದು ಬೊಮ್ಮಾಯಿಗೆ ಹೇಳಿದ್ದೆ, ಆಗ ಸಾಧ್ಯವಾಗಿರಲಿಲ್ಲ, ಈಗಿನ ಸರ್ಕಾರಕ್ಕೆ ಹೇಳಿ ಮಾಡಿಸುವುದಾಗಿ ಯೋಗೇಶ್ವರ್ ಹೇಳಿದರು.

ರಾಮನಗರ: ತಾನು ಸ್ಥಳೀಯನಾದರೂ ಬೇರೆ ಜಿಲ್ಲೆಯಿಂದ ಬಂದಿರುವ ಹೆಚ್ ಡಿ ಕುಮಾರಸ್ವಾಮಿ ಕುಟುಂಬ ತನ್ನ ಮೇಲೆ ದಬ್ಬಾಳಿಕೆ ನಡೆಸುತ್ತಿದೆ, ಮೊದಲು ಕುಮಾರಸ್ವಾಮಿ ಎರಡು ಬಾರಿ ತನ್ನ ವಿರುದ್ಧ ಸ್ಪರ್ಧಿಸಿದರು, ನಂತರ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಈಗ ಅವರ ಮಗ ನಿಖಿಲ್ ಕುಮಾರಸ್ವಾಮಿ, ಈ ಕುಟುಂಬ ಯಾಕೆ ತನ್ನನ್ನು ಅಷ್ಟೊಂದು ವಿರೋಧಿಸುತ್ತದೆ ಅಂತ ಅರ್ಥವಾಗುತ್ತಿಲ್ಲ, ಅದರೆ ತಾನು ಮಾಡಿರುವ ಹೋರಾಟಗಳೆಲ್ಲ ಜನಕ್ಕೆ ಗೊತ್ತು ಎಂದು ಚನ್ನಪಟ್ಟಣ ಕ್ಷೇತ್ರದ ಮಂಕುಂದ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿದ ಸಿಪಿ ಯೋಗೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮತದಾರರ ಜೊತೆ ರಾಜನಂತೆ ವರ್ತಿಸಿರುವ ಕುಮಾರಸ್ವಾಮಿ ವಿಶ್ವಾಸ ಕಳೆದುಕೊಂಡಿದ್ದಾರೆ: ಯೋಗೇಶ್ವರ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.