ವಿಜಯಪುರದಿಂದ ಹಾಸನಾಂಬೆಯ ದರ್ಶನಕ್ಕೆ ಆಗಮಿಸಿದ ಗೌಸ್ ಮೊಹಿಯುದ್ದೀನ್ ಮತ್ತವರ ಮಗಳು ಹಾಜಿರ

ಅರುಣ್​ ಕುಮಾರ್​ ಬೆಳ್ಳಿ

Updated on: Nov 06, 2023 | 1:01 PM

ದೇವನೊಬ್ಬ ನಾಮ ಹಲವು ಅಂತ 12ನೇ ಶತಮಾನದಲ್ಲಿ ಬಸವಣ್ಣನವರು ಹೇಳಿದ್ದನ್ನು ಗೌಸ್ ಪುನರುಚ್ಛರಿಸಿ ತಮಗೆ ಯಾವುದೇ ದೇವ ದೇವತೆಯರ ಬಗ್ಗೆ ಭೇದಭಾವ ಇಲ್ಲ ಅನ್ನುತ್ತಾರೆ. ಹಿಂದೂ-ಮುಸ್ಲಿಂ ಜಗಳ, ಮತೀಯ ಗಲಭೆ ಸ್ವಾಭಾವಿಕ ಅನ್ನುವ ಮಟ್ಟಿಗೆ ಜನರು ಮೆದುಳನ್ನು ಟ್ಯೂನ್ ಮಾಡಿಕೊಂಡಿರುವ ಇವತ್ತಿನ ಕಾಲಘಟ್ಟದಲ್ಲಿ ಗೌಸ್ ಮತ್ತು ಹಾಜಿರ ಸರ್ವಧರ್ಮ ಸಮನ್ವಯತೆಯ ಪ್ರತಿನಿಧಿಗಳಾಗಿ ಗೋಚರವಾಗುತ್ತಾರೆ.

ಹಾಸನ: ಈ ತಂದೆ ಮತ್ತು ಮಗಳನ್ನು ನೋಡಿ ಮಾರಾಯ್ರೇ. ತಂದೆಯ ಹೆರು ಗೌಸ್ ಮೊಹಿಯುದ್ದೀನ್ (Ghouse Mohiuddin)ಮತ್ತು ಮಗಳು ಹಜೀರ (Hajira). ಗೌಸ್ ಕೆಪಿಟಿಸಿಎಲ್ ಉದ್ಯೋಗಿಯಾಗಿದ್ದರೆ ಹಾಜಿರ ಸಹ ಯಾವುದೋ ಇಲಾಖೆಯಲ್ಲಿ ಕೆಲಸ ಮಾಡುತ್ತಾರೆ. ದೂರದ ವಿಜಯಪುರದಿಂದ ಇವರು ಹಾಸನಾಂಬೆಯ ದರ್ಶನ ಪಡೆಯಲು ಹಾಸನಕ್ಕೆ ಬಂದಿದ್ದಾರೆ. ಹಾಸನಾಂಬೆಯ ದರ್ಶನ (Hasanambe Darshana) ಮಾಡಿದರೆ ಒಳ್ಳ್ಳೆಯದಾಗುತ್ತದೆ ಎಂಬ ನಂಬಿಕೆ ತಮಗೆ ಇರುವ ಕಾರಣ ದರ್ಶನಕ್ಕೆ ಬಂದಿರುವುದಾಗಿ ಗೌಸ್ ಮತ್ತು ಹಾಜಿರ ಇಬ್ಬರೂ ಹೇಳುತ್ತಾರೆ. ದೇವನೊಬ್ಬ ನಾಮ ಹಲವು ಅಂತ 12ನೇ ಶತಮಾನದಲ್ಲಿ ಬಸವಣ್ಣನವರು ಹೇಳಿದ್ದನ್ನು ಗೌಸ್ ಪುನರುಚ್ಛರಿಸಿ ತಮಗೆ ಯಾವುದೇ ದೇವ ದೇವತೆಯರ ಬಗ್ಗೆ ಭೇದಭಾವ ಇಲ್ಲ ಅನ್ನುತ್ತಾರೆ. ಹಿಂದೂ-ಮುಸ್ಲಿಂ ಜಗಳ, ಮತೀಯ ಗಲಭೆ ಸ್ವಾಭಾವಿಕ ಅನ್ನುವ ಮಟ್ಟಿಗೆ ಜನರು ಮೆದುಳನ್ನು ಟ್ಯೂನ್ ಮಾಡಿಕೊಂಡಿರುವ ಇವತ್ತಿನ ಕಾಲಘಟ್ಟದಲ್ಲಿ ಗೌಸ್ ಮತ್ತು ಹಾಜಿರ ಸರ್ವಧರ್ಮ ಸಮನ್ವಯತೆಯ ಪ್ರತಿನಿಧಿಗಳಾಗಿ ಗೋಚರವಾಗುತ್ತಾರೆ. ಇದೇ ಮೊದಲ ಸಲ ಹಾಸನಾಂಬೆ ದರ್ಶನಕ್ಕೆ ಬಂದಿರುವ ಹಾಜಿರಗೆ ಸಹೋದ್ಯೋಗಿಗಳಿಂದ ಹಾಸನಾಂಬೆ ಉತ್ಸವದ ಬಗ್ಗೆ ಗೊತ್ತಾಗಿದೆಯಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.