Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗನ ಕಟ್ಟೆಗೆ ನುಗ್ಗಿ ದಾಂಧಲೆ ನಡೆಸಿದ ಮುಸ್ಲಿಂ ಯುವಕ, ಮುಂದೇನಾಯ್ತು..?

ನಾಗನ ಕಟ್ಟೆಗೆ ನುಗ್ಗಿ ದಾಂಧಲೆ ನಡೆಸಿದ ಮುಸ್ಲಿಂ ಯುವಕ, ಮುಂದೇನಾಯ್ತು..?

ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Dec 05, 2024 | 3:44 PM

ಮುಸ್ಲಿಂ ಯುವಕನೋರ್ವ ನಾಗನ ಕಟ್ಟೆಗೆ ಹಾನಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಮಂಗಳೂರು, (ಡಿಸೆಂಬರ್ 05): ಮುಸ್ಲಿಂ ಯುವಕನೋರ್ವ ನಾಗನ ಕಟ್ಟೆಗೆ ಹಾನಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮಹಮ್ಮದ್ ಸಲಾಂ ಎನ್ನುವಾತ ನಿನ್ನೆ (ಡಿಸೆಂಬರ್ 04) ರಾತ್ರಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ನಾಗನಕಟ್ಟೆ ನುಗ್ಗಿ ಗೇಟ್ ಹಾಗೂ ಇತರ ಸಾಮಾಗ್ರಿಗಳಿಗೆ ಹಾನಿ ಮಾಡಿದ್ದಾನೆ. ಬಳಿಕ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಮ್ಮದ್ ಸಲಾಂ ಈ ರೀತಿ ಮಾಡುವುದು ಮೊದಲಲ್ಲ. ಇಂಥಹ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.