AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾಗೆ ಜೀವಕಳೆ; ಜಲಾಶಯದಿಂದ ಇಪ್ಪತ್ತು ತಿಂಗಳ ನಂತರ ನದಿಗೆ ನೀರು

ತುಂಗಭದ್ರಾಗೆ ಜೀವಕಳೆ; ಜಲಾಶಯದಿಂದ ಇಪ್ಪತ್ತು ತಿಂಗಳ ನಂತರ ನದಿಗೆ ನೀರು

ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 23, 2024 | 2:37 PM

Share

ತುಂಗಭದ್ರಾ ಜಲಾಶಯ ಭರ್ತಿಯಾಗದೆ ಇದ್ದರಿಂದ ಕಳೆದ ವರ್ಷ ಬರಗಾಲದಿಂದ ನದಿಗೆ ನೀರನ್ನೇ ಬಿಟ್ಟಿರಲಿಲ್ಲ. ಆದ್ರೆ, ಈ ಬಾರಿ ತುಂಗಭದ್ರಾ ಜಲಾಶಯ ಭರ್ತಿಯಾಗುವ ಹಂತಕ್ಕೆ ಬಂದ ಹಿನ್ನೆಲೆ ಅಧಿಕಾರಿಗಳು ಜುಲೈ ತಿಂಗಳಲ್ಲಿಯೇ ನದಿಗೆ ನೀರು ಬಿಟ್ಟಿದ್ದಾರೆ. ಇಪ್ಪತ್ತು ತಿಂಗಳ ನಂತರ ನದಿಗೆ ನೀರು ಹರಿಯುತ್ತಿದ್ದಂತೆ ರೈತರ ಮೊಗದಲ್ಲಿ ಸಂತಸ ತುಂಬಿಕೊಂಡಿದೆ.

ಕೊಪ್ಪಳ, ಜು.23: ಭಾರಿ ಮಳೆಯಿಂದ ತುಂಗಭದ್ರಾ ಜಲಾಶಯ(Tungabhadra Dam)ಕ್ಕೆ ಜೀವಕಳೆ ಬಂದಿದೆ. ಈ ಹಿನ್ನಲೆ ಇಪ್ಪತ್ತು ತಿಂಗಳ ನಂತರ ಕೊಪ್ಪಳ ಜಿಲ್ಲೆಯಲ್ಲಿ ತುಂಗಭದ್ರಾ ನದಿ ಹರಿಯುತ್ತಿದೆ. ಹೌದು, ಜಲಾಶಯ ಭರ್ತಿಯಾಗದೆ ಇದ್ದರಿಂದ ಕಳೆದ ವರ್ಷ ಬರಗಾಲದಿಂದ ನದಿಗೆ ನೀರನ್ನೇ ಬಿಟ್ಟಿರಲಿಲ್ಲ. ಆದ್ರೆ, ಈ ಬಾರಿ ತುಂಗಭದ್ರಾ ಜಲಾಶಯ ಭರ್ತಿ ಯಾಗೋ ಹಂತಕ್ಕೆ ಬಂದ ಹಿನ್ನೆಲೆ ಅಧಿಕಾರಿಗಳು ಜುಲೈ ತಿಂಗಳಲ್ಲಿಯೇ ನದಿಗೆ ನೀರು ಬಿಟ್ಟಿದ್ದಾರೆ. 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಡ್ಯಾಂನಲ್ಲಿ,  ಇಲ್ಲಿವರೆಗೂ 91 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 87 ಸಾವಿರ ಕ್ಯೂಸೆಕ್ ನೀರಿನ ಒಳ ಹರಿವು ಇದೆ. ಇನ್ನು ನದಿಗೆ ನೀರು ಬಿಡ್ತಿದ್ದಂತೆ ನೀರು ನಾಯಿಗಳು ಪ್ರತ್ಯಕ್ಷವಾಗಿದೆ.  ತುಂಗಭದ್ರಾ ನದಿಯಲ್ಲಿ ಹೆಚ್ಚಾಗಿ ಈ ನೀರು ನಾಯಿಗಳು ಕಾಣಿಸಿಕೊಳ್ಳುತ್ತದೆ. ತುಂಗಭದ್ರಾ ಜಲಾಶಯದಿಂದ ಇಪ್ಪತ್ತು ತಿಂಗಳ ನಂತರ ನದಿಗೆ ನೀರು ಹರಿಯುತ್ತಿದ್ದಂತೆ ರೈತರ ಮೊಗದಲ್ಲಿ ಸಂತಸ ತುಂಬಿಕೊಂಡಿದೆ.

ರಾಜ್ಯದ  ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More