Karnataka Assembly Election: ತಾಯಿ ಕಳೆದುಕೊಂಡ ದುಃಖ ಮೆಟ್ಟಿ ಗದಗಿನ ಪೊಲೀಸ್ ಕಾನ್​ಸ್ಟೇಬಲ್ ಅಶೋಕ್ ಗದಗ ಚುನಾವಣಾ ಕರ್ತವ್ಯಕ್ಕೆ ಹಾಜರಾದರು!

Updated on: May 09, 2023 | 3:00 PM

ಅವರ ಕರ್ತವ್ಯ ಪ್ರಜ್ಞೆಯನ್ನು ಮೆಚ್ಚಿ ಠಾಣೆಯ ಇತರ ಪೊಲೀಸ್ ಸಿಬ್ಬಂದಿ ನಗರದ ಜೆಟಿ ಕಾಲೇಜು ಅವರಣದಲ್ಲಿ ಸನ್ಮಾನಿಸಿತು.

ಗದಗ: ನಗರದ ಗದಗ ಬಡಾವಣೆ ಠಾಣೆಯ ಪೊಲೀಸ್ ಕಾನ್​​ಸ್ಟೇಬಲ್ ಅಶೋಕ ಗದಗ (Ashok Gadag) ಅವರ ಕರ್ತವ್ಯ ನಿಷ್ಠೆ ಮತ್ತು ಕರ್ತವ್ಯ ಪ್ರಜ್ಞೆ (sense of duty) ಅಸಾಮಾನ್ಯವಾದದ್ದು ಅಂತ ಹೇಳಿದರರೆ ಅದು ಅಂಡರ್ ಸ್ಟೇಟ್ಮೆಂಟ್ ಅನಿಸಿಕೊಳ್ಳುತ್ತದೆ. ವಿಷಯವೇನು ಗೊತ್ತಾ? ಅಶೋಕ್ ನಿನ್ನೆಯಷ್ಟೇ ತಮ್ಮ ತಾಯಿ ಶಂಕ್ರಮ್ಮ ಗದಗ ಅವರನ್ನು (Shankramma) ದೀರ್ಘಕಾಲದ ಅನಾರೋಗ್ಯದ ಬಳಿಕ ನಿನ್ನೆ ಕಳೆದುಕೊಂಡಿದ್ದಾರೆ. ನಿನ್ನೆ ಸಾಯಂಕಾಲದವರೆಗೆ ತಾಯಿಯ ಅಂತ್ಯಕ್ರಿಯೆ ಹಾಗೂ ವಿಧಿವಿಧಾನಗಳನ್ನು ಪೂರೈಸಿದ ಅಶೋಕ್ ಇಂದು ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಅವರ ಕರ್ತವ್ಯ ಪ್ರಜ್ಞೆಯನ್ನು ಮೆಚ್ಚಿ ಠಾಣೆಯ ಇತರ ಪೊಲೀಸ್ ಸಿಬ್ಬಂದಿ ನಗರದ ಜೆಟಿ ಕಾಲೇಜು ಅವರಣದಲ್ಲಿ ಸನ್ಮಾನಿಸಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More